top of page
ರಾಜ್ಯ


ವಾಣಿಜ್ಯ LPG ಸಿಲಿಂಡರ್ ಬೆಲೆ ತಕ್ಷಣ ಇಳಿಕೆ ಮಾಡಿ: ಕೇಂದ್ರ ಸರ್ಕಾರಕ್ಕೆ ರಾಜ್ಯ ಹೋಟೆಲ್ ಸಂಘ ಮನವಿ
ಜಾಗತಿಕ ಕಚ್ಚಾ ತೈಲದ ಬೆಲೆಗಳು ಇಳಿಕೆಯಾಗಿರುವ ಹಿನ್ನೆಲೆಯಲ್ಲಿ, ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಇದ್ದ ಮಟ್ಟಕ್ಕೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ತಕ್ಷಣ ಇಳಿಸಬೇಕು ಎಂದು ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ (KSHA) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಜಾಗತಿಕ ಕಚ್ಚಾ ತೈಲದ ಬೆಲೆಗಳು ಇಳಿಕೆಯಾಗಿರುವ ಹಿನ್ನೆಲೆಯಲ್ಲಿ, ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಇದ್ದ ಮಟ್ಟಕ್ಕೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ತಕ್ಷಣ ಇಳಿಸಬೇಕು ಎಂದು ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ (KSHA) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಕೆಎಸ್ಎಚ್ಎ ಅಧ್ಯಕ್ಷ ಜಿ.ಕೆ. ಶೆಟ್ಟಿ, ಫೆಬ


ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ರೆ ಕೇರ್ ಮಾಡಬೇಡಿ: ಲಾಬಿಗಳಿಗೆ ಮಣಿಯಬೇಡಿ- ಡಿಕೆಶಿಗೆ ಹೈಕಮಾಂಡ್ ಖಡಕ್ ವಾರ್ನಿಂಗ್
ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಈ ವಿಷಯದಲ್ಲಿ ಯಾವುದೇ ರೀತಿಯ ಅನಗತ್ಯ ಬೆಳವಣಿಗೆಗಳನ್ನು ಪಕ್ಷವು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು: ಜುಲೈ ಮೊದಲ ವಾರದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಮಯದಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳಲು ಆಕಾಂಕ್ಷಿಯಾಗಿರುವ 60 ಕ್ಕೂ ಹೆಚ್ಚು ಶಾಸಕರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ ಎಂದು ಹೇಳಲಾಗಿದೆ. ಸಿಎಂ ಡಿ.ಕೆ ಶಿವಕುಮಾರ್ ಅವರ ಸಂಪುಟದಲ್ಲಿ 20 ಸಚಿವ ಸ್ಥಾನಗಳು ಖಾಲಿ ಇವೆ. ಜೂನ್ 3 ರಂದು ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಾಗ 13 ಶಾಸ


ಸಚಿವ ಸ್ಥಾನಕ್ಕಾಗಿ ಹೆಚ್ಚುತ್ತಿರುವ ಒತ್ತಡ: ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ!
34 ಸದಸ್ಯರ ಬಲದ ಸಂಪುಟದಲ್ಲಿ ಸದ್ಯ 14 ಸಚಿವರಿದ್ದಾರೆ.ಜೂನ್ 18 ರ ವಿಧಾನ ಪರಿಷತ್ ಚುನಾವಣೆಯ ನಂತರ ಸಂಪುಟ ವಿಸ್ತರಣೆಗೆ ನಿರ್ಧರಿಸಲಾಗಿತ್ತು. ಬೆಂಗಳೂರು: ಸಚಿವಕಾಂಕ್ಷಿಗಳ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಯು ಜುಲೈಗೆ ಮುಂದೂಡಲಾಗುತ್ತಿದೆ. ಹಲವು ಶಾಸಕರು ಸರ್ಕಾರಕ್ಕೆ ಸೇರಲು ಭಾರಿ ಒತ್ತಡವನ್ನು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತಷ್ಟು ಮುಂದೂಡಬಹುದು ಎಂದು ಹೇಳಲಾಗುತ್ತಿದೆ. 34 ಸದಸ್ಯರ ಬಲದ ಸಂಪುಟದಲ್ಲಿ ಸದ್ಯ 14 ಸಚಿವರಿದ್ದಾರೆ.ಜೂನ್ 18 ರ ವಿಧಾನ ಪರಿಷತ್ ಚುನಾವಣೆಯ ನಂತರ ಸಂಪುಟ ವ


MLC ಚುನಾವಣೆ ಅಡ್ಡ ಮತದಾನ: ಪಕ್ಷ ದ್ರೋಹಿಗಳ ವಿರುದ್ಧ ಈಗಾಗಲೇ ಕ್ರಮ ಆರಂಭಿಸಲಾಗಿದೆ: ಆರ್ ಅಶೋಕ್
ಪಕ್ಷದ ಸಂಘಟನೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆಯೂ ಸುದೀರ್ಘ ಚರ್ಚೆ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾಯಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ (ಎಂಎಲ್ಸಿ) ಚುನಾವಣೆಯಲ್ಲಿ ಪಕ್ಷಕ್ಕೆ ದ್ರೋಹ ಎಸಗಿದವರ ವಿರುದ್ಧ ಈಗಾಗಲೇ ಕ್ರಮ ಆರಂಭಿಸಲಾಗಿದೆ ಎಂದು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಹಿರಿಯ ನಾಯಕ ಆರ್. ಅಶೋಕ್ ಮಂಗಳವಾರ ತಿಳಿಸಿದ್ದಾರೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅಡ್ಡಮತದಾನ (ಕ್


NEET ವಿದ್ಯಾರ್ಥಿಗಳಿಗೆ ಪರೀಕ್ಷೆ ತಪ್ಪಲು ಕಾಂಗ್ರೆಸ್ ಕಾರ್ಯಕ್ರಮದ ಟ್ರಾಫಿಕ್ ಕಾರಣ?: Bengaluru police Fact chek ಹೇಳೋದೇನು?
ಒಬ್ಬ ಅಭ್ಯರ್ಥಿಯ 'ಸಿಸಿಟಿವಿ ವಿಶ್ಲೇಷಣೆ'ಯನ್ನು ಆಧರಿಸಿದ ವರದಿಯು ಪರೀಕ್ಷಾರ್ಥಿಯು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ನಿಗದಿಪಡಿಸಿದ ಕಟ್-ಆಫ್ಗೆ ಕೇವಲ 33 ನಿಮಿಷಗಳ ಮೊದಲು ಮನೆಯಿಂದ ಹೊರಟಿರುವುದನ್ನು... ಬೆಂಗಳೂರು: ಕಾಂಗ್ರೆಸ್ ನ ಸಂಕಲ್ಪ ಸಮಾವೇಶದಿಂದಾಗಿ ಕೆಲವು ಅಭ್ಯರ್ಥಿಗಳು ತಮ್ಮ ನೀಟ್ ಕೇಂದ್ರವನ್ನು ತಡವಾಗಿ ತಲುಪಿದ್ದಾರೆ ಎಂಬ ಆರೋಪದ ನಂತರ, ಬೆಂಗಳೂರು ಸಂಚಾರ ಪೊಲೀಸರು ಮಂಗಳವಾರ "ಸತ್ಯ ಪರಿಶೀಲನೆ" ವರದಿಯನ್ನು ಬಿಡುಗಡೆ ಮಾಡಿದ್ದಾರೆ. ಒಬ್ಬ ಅಭ್ಯರ್ಥಿಯ 'ಸಿಸಿಟಿವಿ ವಿಶ್ಲೇಷಣೆ'ಯನ್ನು ಆಧರಿಸಿದ ವರದಿಯು ಪರೀಕ್ಷಾರ್ಥಿಯು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ನಿಗದಿಪಡಿಸಿದ ಕಟ


ಖರ್ಗೆಯವರಿಗೆ CM ಆಗುವ ಆಸೆ; ಕಾಂಗ್ರೆಸ್ನಲ್ಲಿ ನಾಯಕತ್ವ ಬಿಕ್ಕಟ್ಟು: D K ಶಿವಕುಮಾರ್ ಪರ ಘೋಷಣೆಗೆ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದಕ್ಕೆ ಬಿಜೆಪಿ ನಾಯಕ ಟೀಕೆ-Video
ಮುಖ್ಯಮಂತ್ರಿ ಆಗುವ ಅವರ ಸ್ವಂತ ಮಹತ್ವಾಕಾಂಕ್ಷೆಯನ್ನು ಗಮನಿಸಿದರೆ, ಅವರು ಕೋಪಗೊಳ್ಳುವುದು ಅನಿವಾರ್ಯವಾಗಿತ್ತು ಎಂದು ಟೀಕಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಮುಖ್ಯಮಂತ್ರಿ ಆಗಲು ಬಯಸುತ್ತಿದ್ದಾರೆ. ಕಾಂಗ್ರೆಸ್ನಲ್ಲಿ ನಾಯಕತ್ವದ ಬಿಕ್ಕಟ್ಟು ಉಂಟಾಗಿದೆ. ತಮ್ಮದೇ ಪಕ್ಷದ ಮುಖ್ಯಮಂತ್ರಿಗೆ ಕಾರ್ಯಕರ್ತರು ಜಯಘೋಷ ಮಾಡಿದ ಕಾರಣಕ್ಕೆ ಪಕ್ಷದ ಅಧ್ಯಕ್ಷರೇ ಕಾರ್ಯಕರ್ತರ ಮೇಲೆ ಕೋಪಗೊಂಡಿರುವುದು ಇದೇ ಮೊದಲ ಬಾರಿ ಎಂದು ಬಿಜೆಪಿಯ ವಕ್ತಾರ ಗೌರವ್ ವಲ್ಲಭ್ ಟೀಕಿಸಿದ್ದಾರೆ. ಮುಖ್ಯಮಂತ್ರಿ ಆಗುವ ಅವರ ಸ್ವಂತ ಮಹತ್ವಾಕಾಂಕ್ಷೆಯನ್ನು ಗಮನಿಸಿದರೆ, ಅವರು ಕೋಪಗೊಳ್ಳುವುದು ಅನಿವಾರ್ಯವಾಗಿತ


TMC ಮಾಜಿ ಶಾಸಕ ರಾಮೇಂದು ಸಿಂಹರಾಯ್ ಬೆಳಗಾವಿಯಲ್ಲಿ ಬಂಧನ: ಹೂಗ್ಲಿಯ ಪೊಲೀಸ್ ಠಾಣೆಗೆ ಕರತರುವಾಗ ಚೋರ್..ಚೋರ್ ಎಂದು ಮೊಟ್ಟೆ, ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರು-Video
ಸಿಂಹರಾಯ್ ಅವರನ್ನು ಟ್ರಾನ್ಸಿಟ್ ರಿಮಾಂಡ್ ಮೇಲೆ ಪೊಲೀಸ್ ಠಾಣೆಗೆ ಕರೆತಂದಾಗ, ಠಾಣೆಯ ಹೊರಗೆ ಜನರು ಗುಂಪುಗೂಡಿ "ಚೋರ್-ಚೋರ್" (ಕಳ್ಳ-ಕಳ್ಳ) ಎಂಬ ಘೋಷಣೆಗಳನ್ನು ಕೂಗಿ ಅವರತ್ತ ಮೊಟ್ಟೆ, ಚಪ್ಪಲಿಗಳನ್ನು ಎಸೆದರು. ಪಶ್ಚಿಮ ಬಂಗಾಳದ ತಾರಕೇಶ್ವರ್ ವಿಧಾನಸಭಾ ಕ್ಷೇತ್ರದ ತೃಣಮೂಲ ಕಾಂಗ್ರೆಸ್ (TMC) ಮಾಜಿ ಶಾಸಕ ರಾಮೇಂದು ಸಿಂಹರಾಯ್ ಅವರನ್ನು, ಸರ್ಕಾರಿ ಪರಿಹಾರ ಸಾಮಗ್ರಿಗಳ ಅಕ್ರಮ ಸಾಗಣೆ ಹಾಗೂ ಶಸ್ತ್ರಾಸ್ತ್ರ ಕಾಯ್ದೆ (Arms Act) ಅಡಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಬಂಧಿಸಿದ ಬಳಿಕ ನಿನ್ನೆ ಭಾನುವಾರ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಧನಿಯಾಖಾಲಿ ಪೊಲೀಸ್ ಠಾಣೆಗ


ಕ್ರಾಸ್ ವೋಟಿಂಗ್: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಹೈಕಮಾಂಡ್ ಬುಲಾವ್; ಯಾರ ತಲೆದಂಡವಾಗುತ್ತೆ?
ವಿಧಾನ ಪರಿಷತ್ 7 ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನ 11 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಇದನ್ನು ಗಂಭಿರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್. ರಾಜ್ಯ ನಾಯಕರಿಗೆ ಬುಲಾವ್ ನೀಡಿದೆ. ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ತನ್ನ ಶಾಸಕರು ಅಡ್ಡ ಮತದಾನ ಮಾಡಿದ್ದಕ್ಕೆ ಬಿಜೆಪಿ ಹೈಕಮಾಂಡ್ ತೀವ್ರ ಅಸಮಾಧಾನಗೊಂಡಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತು ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರಿಗೆ ಜೂನ್ 23 ರಂದು ದೆಹಲಿಗೆ ಬರುವಂತೆ ಬುಲಾವ್ ನೀಡಲಾಗಿದೆ ಎಂದು ಮೂಲಗಳು ಶುಕ್ರವಾರ


ರಾಜಕೀಯವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್- ಜೆಡಿಎಸ್ ಪೈಪೋಟಿ -ಅಡ್ಡ ಮತದಾನದ ಭೀತಿ! 7ನೇ ಸ್ಥಾನ ಗೆಲ್ಲೋರು ಯಾರು?
ಏಳು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯುವ ಮುನ್ನಾದಿನ ಕಾಂಗ್ರೆಸ್ ಪರವಾಗಿ ಅಡ್ಡ ಮತದಾನ ನಡೆಯುವ ಭೀತಿಯ ನಡುವೆಯೇ ಜೆಡಿಎಸ್ ಬುಧವಾರ ತನ್ನ ಶಾಸಕರನ್ನು ರೆಸಾರ್ಟ್ಗೆ ಸ್ಥಳಾಂತರಿಸಿದೆ. ಬೆಂಗಳೂರು: ವಿಧಾನ ಪರಿಷತ್ನಲ್ಲಿ ಇದೇ 30ರಂದು ತೆರವಾಗಲಿರುವ 7 ಸ್ಥಾನಗಳಿಗೆ ಗುರುವಾರ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. ಸಂಖ್ಯಾಬಲ ಆಧರಿಸಿ ಕಾಂಗ್ರೆಸ್ 4 ಹಾಗೂ ಬಿಜೆಪಿ 2 ಸ್ಥಾನ ಗೆಲ್ಲಲಿದ್ದು, ಬಾಕಿ 1 ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಸ್ಪರ್ಧೆಯಿದೆ. ಗುರುವಾರ ಬೆಳಗ್ಗೆ 9ರಿಂದ ಸಂಜೆ 4ವರೆಗೆ ವಿಧಾನಸೌಧದ ಕೊಠ


RSS ಟೀಕಿಸಿ ನೆಹರು ಕುಟುಂಬದ ಕುಡಿಗಳ ಸಂತೃಪ್ತಿಪಡಿಸುವ ಯತ್ನ: ‘ವಿಕೃತ ಖುಷಿ ಸಿಗುವುದಾದರೆ ಬೈದುಕೊಳ್ಳಿ; ಪ್ರಿಯಾಂಕ್ ಖರ್ಗೆಗೆ BJP ತಿರುಗೇಟು
ಅಲ್ಪ ಸಂಖ್ಯಾತ ಹೆಸರಿನ ಮತೀಯವಾದಿ ಸಂಘಟನೆಗಳು ಈ ದೇಶದಲ್ಲಿ ತಲೆಯೆತ್ತಿರುವುದು, ಅಕ್ರಮ ವಿದೇಶಿ ದೇಣಿಗೆ ಪಡೆದು ರಾಷ್ಟ್ರದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸುತ್ತಿರುವ ಮಾಹಿತಿ ಗೃಹ ಇಲಾಖೆ ನಡೆಸುತ್ತಿರುವ ನಿಮ್ಮ ಬಳಿಯೇ ಇದೆ. ಈ ಬಗ್ಗೆ ಪತ್ರ ಬರೆದು ಆ ಸಂಸ್ಥೆಗಳಿಂದ ವಿವರ ಏಕೆ ನೀವು ಕೇಳುವುದಿಲ್ಲ? ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಕುರಿತ ಚರ್ಚೆ ತೀವ್ರಗೊಂಡಿದ್ದು, ಗೃಹ ಸಚಿವ ಪ್ರಿಯಾಂಕ್ಖರ್ಗೆ ಅವರ ಇತ್ತೀಚಿನ ಹೇಳಿಕೆಗಳಿಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಆರ್ಎಸ್ಎಸ್ ವಿರುದ್ಧದ ಟೀಕೆಗಳ ಮೂಲಕ ಕಾಂಗ್ರೆಸ್ ರಾಜ್ಯದ ಪ್ರಮುಖ ಸ


ಒಂಟಿಗಣ್ಣಿನಿಂದ ಕಣ್ಣೀರು ಸುರಿಸುತ್ತಿದ್ದ ಬಾಲಕೃಷ್ಣಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಹತಾಶೆ: ಆರ್ ಅಶೋಕ್ ತಿರುಗೇಟು
ಮಾಗಡಿ ಶಾಸಕ ಬಾಲಕೃಷ್ಣ, ಈಗ ಸಚಿವ ಸ್ಥಾನ ಸಿಗದ ಕಾರಣ ಹತಾಶೆಯಿಂದ ವಿರೋಧ ಪಕ್ಷದ ನಾಯಕರನ್ನು ಅವಮಾನಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು: ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಮತ್ತು ಬಿಜೆಪಿ ನಾಯಕ ಆರ್. ಅಶೋಕ್ ನಡುವೆ 'ಬಿಡದಿ ಟೌನ್ಶಿಪ್' ಭೂಸ್ವಾಧೀನ ವಿಚಾರವಾಗಿ ತೀವ್ರ ರಾಜಕೀಯ ಜಟಾಪಟಿ ಏರ್ಪಟ್ಟಿದೆ. ಕಳೆದ ಮೂರು ವರ್ಷಗಳಿಂದ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆಂದು ಪ್ರತಿಪಾದಿಸುತ್ತಾ, ನಿರಂತರವಾಗಿ ಮಾಧ್ಯಮಗಳಿಗೆ ಹೇಳಿಕೆಗಳನ್ನು ನೀಡುತ್ತಾ, ಒಂಟಿ ಕಣ್ಣಿನಿಂದ ಕಣ್ಣೀರು ಸುರಿಸುತ್ತಿದ್ದ ಮಾಗಡಿ ಶಾಸಕ ಬಾಲಕೃ


ಮುಂದಿನ ಎರಡು ವರ್ಷಕ್ಕಷ್ಟೇ ಅಲ್ಲ...: ಐದು ಗ್ಯಾರಂಟಿಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ, ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ. ಬೆಂಗಳೂರು: ಗ್ಯಾರಂಟಿಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಲಾಗುವುದಿಲ್ಲ ಎಂದು ಸೋಮವಾರ ಪ್ರತಿಪಾದಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ, ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ. ಮುಂದಿನ ಎರ


ಕಾಂಗ್ರೆಸ್ ಸ್ಥಾಪಿಸಿದ್ದು ವಿದೇಶಿಗರು-RSS ಸ್ಥಾಪಿಸಿದ್ದು ಭಾರತೀಯರು, ಸಮಾಜ ಸೇವೆಯಿಂದ ಬೆಳೆದ ಸಂಘಟನೆಗೆ ಮಾನ್ಯತೆ ಬೇಕಿಲ್ಲ: ಸಂಸದ ಬೊಮ್ಮಾಯಿ
ದೇಶದಲ್ಲಿ ನೋಂದಾಯಿತ ಮತ್ತು ನೋಂದಣಿಯಾಗದ ಅನೇಕ ಸಂಘಟನೆಗಳಿವೆ. ಆರ್ಎಸ್ಎಸ್ಗೆ ಸುದೀರ್ಘ ಇತಿಹಾಸವಿದ್ದು, ಇದು ವಿಶ್ವದ ಅತಿದೊಡ್ಡ ಸ್ವಯಂಸೇವಾ ಸಂಘಟನೆಗಳಲ್ಲಿ ಒಂದಾಗಿದೆ. ಸಮಾಜ ಸೇವೆಯಲ್ಲಿ ಮಹತ್ವದ ಕೊಡುಗೆ ನೀಡಿರುವ ಕಾರಣವೇ ಕೆಲವರು ಈ ಸಂಘಟನೆಯನ್ನು ಗುರಿಯಾಗಿಸಿಕೊಂಡು ಟೀಕಿಸುತ್ತಿದ್ದಾರೆ. ಗದಗ: ಕಾಂಗ್ರೆಸ್ ಪಕ್ಷವನ್ನು ವಿದೇಶಿಗರು ಸ್ಥಾಪಿಸಿದ್ದರೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ (ಆರ್ಎಸ್ಎಸ್) ಅನ್ನು ಭಾರತೀಯರು ಸ್ಥಾಪಿಸಿದ್ದಾರೆ. ಆರ್ಎಸ್ಎಸ್ಗೆ ಮಾನ್ಯತೆ ನೀಡುವ ಪ್ರಶ್ನೆಯೂ ಇಲ್ಲ, ಅಗತ್ಯವೂ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಗದಗದ ವೀರನಾರಾಯಣ


ಮಕ್ಕಳಿಗಾಗಿ ಚಿನ್ನಾಭರಣ ಖರೀದಿ ಬದಲು ಈ ಹೂಡಿಕೆ ಮಾಡಿ... ಅವರ ಭವಿಷ್ಯ ಭದ್ರವಾಗುತ್ತೆ...
ಆರ್ಥಿಕ ಆರೋಗ್ಯಕ್ಕೆ ಕಾರಣವಾಗುವ ಆರ್ಥಿಕ ಶಿಕ್ಷಣವು ನಿಮ್ಮ ಮಗಳಿಗೆ ನೀವು ನೀಡಬಹುದಾದ ಅತ್ಯುತ್ತಮ "ಆಭರಣ"ವಾಗಿದೆ - ಕಾಲು ಶತಮಾನದ ಹಿಂದೆ ನನ್ನ ಮಗಳು ಜನಿಸಿದಾಗ, ಜನರು ನಾನು ಅವಳಿಗೆ ಚಿನ್ನ ಮತ್ತು ಆಭರಣಗಳನ್ನು ಖರೀದಿಸಬೇಕೆಂದು ಹೇಳಿದ್ದರು. ನಾನು 'ನಾನು ಅವಳಿಗೆ ಆರ್ಥಿಕ ಶಿಕ್ಷಣವನ್ನು ನೀಡುತ್ತೇನೆ- ಅದು ಚಿನ್ನ ಅಥವಾ ಆಭರಣಗಳಿಗಿಂತ ಉತ್ತಮವಾಗಿದೆ!' ಎಂದು ಹೇಳಿದೆ. ಆರ್ಥಿಕ ಆರೋಗ್ಯಕ್ಕೆ ಕಾರಣವಾಗುವ ಆರ್ಥಿಕ ಶಿಕ್ಷಣವು ನಿಮ್ಮ ಮಗಳಿಗೆ ನೀವು ನೀಡಬಹುದಾದ ಅತ್ಯುತ್ತಮ "ಆಭರಣ"ವಾಗಿದೆ - ಮತ್ತು ಅದು ಯಾವುದೇ ಭೌತಿಕ ಆಸ್ತಿಯನ್ನು ಮೀರಿಸುತ್ತದೆ. ವಿಶೇಷವಾಗಿ ಭಾರತದಂತಹ ದೇಶಗಳಲ್ಲಿ ಚಿನ್


'Murder Of Democracy': ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದುಗೊಂಡ ಹಿನ್ನೆಲೆ, EC ಕಚೇರಿ ಹೊರಗೆ ಕಾಂಗ್ರೆಸ್ ಭಾರಿ ಪ್ರತಿಭಟನೆ!
ಈ ವೇಳೆ ಕಾಂಗ್ರೆಸ್ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಮತ್ತು ಭದ್ರತಾ ಸಿಬ್ಬಂದಿ ನಡುವೆ ತೀವ್ರ ವಾಗ್ವಾದ ನಡೆದಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಅನುಮತಿ ಇಲ್ಲದ ಕಾರಣ ರಮೇಶ್ ಕಚೇರಿಗೆ ಪ್ರವೇಶಿಸುವುದನ್ನು ತಡೆಯಲಾಯಿತು ಎಂದು ಮೂಲಗಳು ತಿಳಿಸಿವೆ. ನವದೆಹಲಿ: ಮಧ್ಯಪ್ರದೇಶದ ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ನಂತರ ಮಂಗಳವಾರ ಸಂಜೆ ಚುನಾವಣಾ ಆಯೋಗದ ಕಚೇರಿ ಹೊರಗೆ ಹಿರಿಯ ಕಾಂಗ್ರೆಸ್ ನಾಯಕರು ಭಾರಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಮತ್ತು ಭದ್ರತಾ ಸಿಬ್ಬಂದಿ ನಡುವೆ ತೀ


NEET, CBSE ಅಕ್ರಮಕ್ಕೆ ಆಕ್ರೋಶ: ಜೂನ್ 13ರ ಒಳಗೆ ಪ್ರಧಾನ್ ಕೆಳಗಿಳಿಯದಿದ್ದರೆ ಪ್ರತೀ ರಾಜ್ಯದಲ್ಲೂ ಪ್ರತಿಭಟನೆ- Cockroach Janata Party ಎಚ್ಚರಿಕೆ
ಶಿಕ್ಷಣ ಕ್ಷೇತ್ರದಲ್ಲಿ ನಡೆದಿರುವ ಅಕ್ರಮಗಳ ಹೊಣೆ ಹೊತ್ತು ಪ್ರಧಾನ್ ಅವರು ಸ್ಥಾನ ತ್ಯಜಿಸಬೇಕು. ಜೂನ್ 13ರೊಳಗೆ ರಾಜೀನಾಮೆ ಸಲ್ಲಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜೂನ್ 13, 2026ರ ಒಳಗೆ ರಾಜೀನಾಮೆ ನೀಡದಿದ್ದರೆ ದೇಶದ ವಿವಿಧ ರಾಜ್ಯಗಳು ಮತ್ತು ನಗರಗಳಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (CJP) ಎಚ್ಚರಿಕೆ ನೀಡಿದೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ವೀಡಿಯೋ ಸಂದೇಶದ ಮೂಲಕ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಎಚ್


KPCC ಪಟ್ಟಕ್ಕೆ ಭಾರೀ ಪೈಪೋಟಿ: ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಹತ್ವದ ಸಭೆ, 21 ಸ್ವಾಮೀಜಿಗಳಿಂದ ಬೆಂಬಲದ ಸಂದೇಶ..!
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ನಂತರ ಹೊಸ ರಾಜಕೀಯ ಸಮೀಕರಣಗಳು ರೂಪುಗೊಳ್ಳುತ್ತಿರುವ ಸಂದರ್ಭದಲ್ಲಿ ಈ ಭೇಟಿ ವಿಶೇಷ ಮಹತ್ವ ಪಡೆದುಕೊಂಡಿದೆ. ಬೆಳಗಾವಿ/ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಹಾಗೂ ಹೊಸ ಸಚಿವ ಸಂಪುಟ ರಚನೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಹಿರಿಯ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಅವರನ್ನು 21 ಸ್ವಾಮೀಜಿಗಳ ನಿಯೋಗ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದೆ. ಈ ಭೇಟಿಯಲ್ಲಿ ಹಿಂದುಳಿದ ವರ್ಗಗಳು, ದಲಿತರು ಹಾಗೂ ಆದಿವಾಸಿ ಸಮುದಾಯಗಳಿಗೆ ಪಕ್ಷ ಸಂಘಟನೆ ಮತ್ತು ಸರ್ಕಾರದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡುವ ವಿಷಯ ಕುರಿತು ಚರ್ಚೆಯಾಗ


ಡಿ.ಕೆ. ಶಿವಕುಮಾರ್ ಜೊತೆ ಪ್ರಮಾಣವಚನ ಸ್ವೀಕರಿಸಲಿರುವ 10-12 ಸಚಿವರ ಪಟ್ಟಿ ಇಂದು ಪ್ರಕಟ ಸಾಧ್ಯತೆ
ಉನ್ನತ ಮಟ್ಟದ ಸಭೆಯಲ್ಲಿ ಸಿದ್ದರಾಮಯ್ಯ ಸಲ್ಲಿಸಿದ ಪಟ್ಟಿಯಲ್ಲಿರುವ 12 ಮಂದಿಯಲ್ಲಿ 10 ಮಂದಿಯನ್ನು ಹಾಗೂ ಶಿವಕುಮಾರ್ ಸಲ್ಲಿಸಿದ 15 ಮಂದಿಯ ಪಟ್ಟಿಯಿಂದ 12 ಮಂದಿಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಬುಧವಾರ ಪ್ರಮಾಣವಚನ ಸ್ವೀಕರಿಸಲಿರುವ 10 ರಿಂದ 12 ಮಂದಿ ಶಾಸಕರ ಅಂತಿಮ ಪಟ್ಟಿ ಮಂಗಳವಾರ ಪ್ರಕಟವಾಗುವ ಸಾಧ್ಯತೆಯಿದ್ದು, ಬುಧವಾರ ಸಂಜೆ 4.05ಕ್ಕೆ ಲೋಕಭವನದ ಗ್ಲಾಸ್ ಹೌಸ್ನಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕ


ಮುಂದಿನ ಸಿಎಂ ಪರಮೇಶ್ವರ್?: ನಾಯಕತ್ವ ಬದಲಾವಣೆಯ ಸುಳಿವು ನೀಡಿದ ಮಾಜಿ ಸಚಿವ ರಾಜಣ್ಣ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಹೊಸ ಊಹಾಪೋಹಗಳನ್ನು ಹುಟ್ಟುಹಾಕಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಗೃಹ ಸಚಿವ ಜಿ. ಪರಮೇಶ್ವರ ಮುಖ್ಯಮಂತ್ರಿಯಾಗಬೇಕು... ತುಮಕೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಹೊಸ ಊಹಾಪೋಹಗಳನ್ನು ಹುಟ್ಟುಹಾಕಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಗೃಹ ಸಚಿವ ಜಿ. ಪರಮೇಶ್ವರ cmಮುಖ್ಯಮಂತ್ರಿಯಾಗಬೇಕು ಎಂದು ಹೇಳಿದರು. ತುಮಕೂರಿನಲ್ಲಿ ನಡೆದ ರಾಜ್ಯ ಸರ್ಕಾರದ ಮೂರನೇ ವರ್ಷದ ಸಾಧನೆ ಸಮಾರಂಭದಲ್ಲಿ ಮಾತನಾಡಿದ ರಾಜಣ್ಣ, ಸಿದ್ದರಾಮಯ್ಯ ಬದಲಾವಣೆ ಬಯಸಿದರೆ, ಪರಮೇಶ್ವರ


BLR Airport: ಮತ್ತೊಂದು ಮೈಲಿಗಲ್ಲು ಸಾಧಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ!
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2025-26 ರ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದು, 532,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಲಾಗಿದೆ. ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ಬೆಂಗಳೂರು 2025-26 ಹಣಕಾಸು ವರ್ಷದಲ್ಲಿ ಹೊಸ ದಾಖಲೆ ಬರೆದಿದ್ದು, ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಮೈಲಿಗಲ್ಲು ಸೃಷ್ಟಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2025-26 ರ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದು, 532,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಲಾಗಿದೆ. ರಾಜ್
bottom of page

