top of page


ಪ್ರಧಾನ್ ಮಾತ್ರವಲ್ಲ, ಅಮಿತ್ ಶಾ ಕೂಡ ರಾಜಿನಾಮೆ ನೀಡಬೇಕು: ಉಮರ್ ಖಾಲಿದ್ ಪೋಸ್ಟರ್ ಪ್ರದರ್ಶಿಸಿದರೇ ತಪ್ಪೇನು; ಇದೇನು ಪಾಕಿಸ್ತಾನವೇ?
2020ರ ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಅವರನ್ನು ಐದು ವರ್ಷಗಳಿಂದ ಜೈಲಿನಲ್ಲಿಟ್ಟಿದ್ದೀರಿ, ಸೂಕ್ತ ಚಾರ್ಜ್ಶೀಟ್ ಏಕೆ ಹಾಕಿಲ್ಲ? ಇದೇನು ಪಾಕಿಸ್ತಾನವೇ? ಬೆಂಗಳೂರು: ನೀಟ್ ಪ್ರತಿಭಟನೆ ವೇಳೆ ಉಮರ್ ಖಾಲಿದ್ ಪರ ಪೋಸ್ಟರ್ ಪ್ರದರ್ಶಿಸಿದ್ದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸಮರ್ಥಿಸಿಕೊಂಡಿದ್ದು, ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, 2020ರ ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಅವರನ್ನು ಐದು ವರ್ಷಗಳಿಂದ ಜೈಲಿನಲ್ಲಿಟ್ಟಿದ್ದೀರಿ, ಸೂಕ್ತ ಚಾರ್ಜ್ಶೀಟ್ ಏಕೆ ಹಾಕಿಲ್ಲ? ಇದೇನು ಪಾಕಿಸ್ತಾನವೇ? ಕೇಂದ್ರ ಸರ
new waves technology
Jul 251 min read


'ಪ್ರಜಾಪ್ರಭುತ್ವ ಉಳಿಸಿ': CJP Protest ಬೆಂಬಲಿಸಿ ಸಂವಿಧಾನದ ಪ್ರಸ್ತಾವನೆ ಓದಿದ ಸುಪ್ರೀಂ ಕೋರ್ಟ್ ವಕೀಲರು!
ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಮತ್ತು ಎಸ್ ಮುರಳೀಧರ್ ಅವರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ನ ಆವರಣದಲ್ಲಿ "ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ" ಘೋಷವಾಕ್ಯದಡಿ ವಕೀಲರು ಸಂವಿಧಾನದ ಪ್ರಸ್ತಾವನೆ ಓದಿ, ರಾಷ್ಟ್ರಗೀತೆ ಹಾಡಿದರು. ನವದೆಹಲಿ: ನೀಟ್ ಅಕ್ರಮ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಮತ್ತು ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ಸುಪ್ರೀಂ ಕೋರ್ಟ್ನಲ್ಲಿ ಗುರುವಾರ ವಕೀಲರು ನಮ್ಮ "ಪ್ರಜಾಪ್ರಭುತ್ವ ಉಳಿಸಿ,
new waves technology
Jul 231 min read


10 ವರ್ಷದಲ್ಲಿ 152 ಪ್ರಶ್ನೆ ಪತ್ರಿಕೆ ಲೀಕ್: ಪ್ರಧಾನ್ ರಾಜಿನಾಮೆ ಕೊಡಬೇಕು, Modi ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು; 3 ಷರತ್ತು ಹಾಕಿದ ರಾಹುಲ್
ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭದ್ರತಾ ಪಡೆಗಳು ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ್ದಾರೆ ಎಂದು ಹೇಳಿದರು. ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೂ ಅವರ ಮೇಲೆ ಲಾಠಿ ಚಾರ್ಚ್ ನಡೆಸಲಾಗಿದೆ. ನವದೆಹಲಿ: ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭದ್ರತಾ ಪಡೆಗಳು ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ್ದಾರೆ ಎಂದು ಹೇಳಿದರು. ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೂ ಅವರ ಮೇಲೆ ಲಾಠಿ ಚಾರ್ಚ್ ನಡೆಸಲಾಗಿದೆ. ಕಳೆದ
new waves technology
Jul 221 min read


ನಾಳೆಯೇ ನೂತನ ಸಚಿವರ ಪ್ರಮಾಣವಚನ?: ಅಗತ್ಯ ಸಿದ್ಧತೆ ನಡೆಸುವಂತೆ ರಾಜ್ಯಪಾಲರ ಕಚೇರಿಗೆ ಅನಧಿಕೃತ ಸೂಚನೆ
ಇಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸರಣಿ ಸಭೆ ನಡೆಯುತ್ತಿದೆ. ಇಂದೇ ಸಚಿವರ ಪಟ್ಟಿ ಅಂತಿಮಗೊಂಡು ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜತೆ ಸರಣಿ ಸಭೆಯಲ್ಲಿ ನಿರತರಾಗಿದ್ದಾರೆ. ಇಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸರಣಿ ಸಭೆ ನಡೆಯುತ್ತಿದೆ. ಇಂದೇ ಸಚಿವರ ಪಟ್ಟಿ ಅಂತಿಮಗೊಂಡು ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯ
new waves technology
Jul 211 min read


ಗಣಿ ಇಲಾಖೆಗೆ ಮೇಜರ್ ಸರ್ಜರಿ: ಇತಿಹಾಸದಲ್ಲೇ ಅತಿದೊಡ್ಡ ವರ್ಗಾವಣೆ; ಬರೋಬ್ಬರಿ 160 ಅಧಿಕಾರಿಗಳು ಎತ್ತಂಗಡಿ!
ಗಣಿ ಇಲಾಖೆಯಲ್ಲಿ ಒಂದೇ ಬಾರಿಗೆ ಬರೋಬ್ಬರಿ 160 ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗಣಿ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದು, ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿದ್ದ ಇಲಾಖೆಯ ಶೇ.80ರಷ್ಟು ಸಿಬ್ಬಂದಿಯನ್ನು ವರ್ಗಾವಣೆ ಮಾಡುವ ಮೂಲಕ ಭರ್ಜರಿ ಶಾಕ್ ನೀಡಿದ್ದಾರೆ. ಗಣಿ ಇಲಾಖೆಯಲ್ಲಿ ಒಂದೇ ಬಾರಿಗೆ ಬರೋಬ್ಬರಿ 160 ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 131 ಭೂವಿಜ್ಞಾನಿಗಳು, 23 ಹಿರಿಯ ಭೂವಿಜ್ಞಾನಿಗಳು, 6 ಉಪನಿರ್ದೇಶಕರನ್ನು ವರ್ಗಾವಣೆ ಮಾಡಲಾಗಿದೆ. ದಶಕಗಳ ಕಾ
new waves technology
Jul 201 min read


ಖಮೇನಿಗೆ ಅಂತಿಮ ವಿದಾಯ: ಬಿಕ್ಕಿಬಿಕ್ಕಿ ಅತ್ತ ಇರಾನ್ ಸ್ಪೀಕರ್, ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ! Video
ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಯುದ್ಧ ಆರಂಭಿಸಿದ ಮೊದಲ ದಿನವಾದ ಫೆಬ್ರವರಿ 28 ರಂದು ನಡೆದ ದಾಳಿಯಲ್ಲಿ ಅಲಿ ಖಮೇನಿ ಅವರ ಹತ್ಯೆಯಾಗಿತ್ತು. ಟೆಹ್ರಾನ್: ಇರಾನ್ ನ ಪರಮೋಚ್ಛ ನಾಯಕರಾಗಿದ್ದ ಆಯತೊಲ್ಲಾ ಅಲಿ ಖಮೇನಿ ಅವರ ಅಂತಿಮ ವಿದಾಯ ಸಮಾರಂಭದಲ್ಲಿ ಭಾಗವಹಿಸಿದ್ದ ಇರಾನ್ ನ ಸಂಸತ್ ಸ್ಪೀಕರ್ ಮೊಹಮ್ಮದ್ ಬಾಖಿರ್ ಖಾಲೀಬಾಫ್, ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ, ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಮತ್ತಿತರ ಧಾರ್ಮಿಕ ಮುಖಂಡರು ಕಣ್ಣೀರಿಟಿದ್ದಾರೆ. ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಯುದ್ಧ ಆರಂಭಿಸಿದ ಮೊದಲ ದಿನವಾದ ಫೆಬ್ರವರಿ 28 ರಂದು ನಡೆದ ದಾಳಿಯಲ್
new waves technology
Jul 41 min read


ರಹಸ್ಯ ಪೋಸ್ಟ್ ಹಂಚಿಕೊಂಡ ವೈಭವ್ ಸೂರ್ಯವಂಶಿ; ಇಂಗ್ಲೆಂಡ್ ವಿರುದ್ಧದ 2ನೇ ಪಂದ್ಯದಲ್ಲಿ ಆಡಲು ಅವಕಾಶ?
ಸಂಜು ಸ್ಯಾಮ್ಸನ್ ತಮ್ಮ ಕಳೆದ ಮೂರು ಇನಿಂಗ್ಸ್ಗಳಲ್ಲಿ ಕ್ರಮವಾಗಿ 5, 0 ಮತ್ತು 1 ರನ್ ಗಳಿಸಿದ್ದಾರೆ. ಹೀಗಾಗಿ, ವೈಭವ್ ಸೂರ್ಯವಂಶಿ ಪದಾರ್ಪಣೆ ಮಾಡಿದರೆ ಅವರು ಹೊರಗುಳಿಯಬೇಕಾಗಬಹುದು. ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ನಿಂದ 15 ವರ್ಷದ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಹೊರಗುಳಿದಿದ್ದರು. ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲನೇ ಪಂದ್ಯದಲ್ಲಿಯೂ ಅವರಿಗೆ ಸ್ಥಾನ ಸಿಕ್ಕಿರಲಿಲ್ಲ. ಹೀಗಾಗಿ, ಕ್ರಿಕೆಟ್ ಜಗತ್ತಿನಾದ್ಯಂತ ವೈಭವ್ ಸೂರ್ಯವಂಶಿಗೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ನೀಡಬೇಕೆಂಬ ಕೂಗುಗಳು ಕೇಳಿಬಂದಿದ್ದವು. ಇದೀಗ ವೈಭವ್ ಸೂರ
new waves technology
Jul 42 min read


ವಜ್ರದ ಚಿನ್ನಾಭರಣ ಧರಿಸಿ ರೀಲ್ ಪೋಸ್ಟ್: ವರ್ಷದ ಹಿಂದೆ 10 ಲಕ್ಷದ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಕಳ್ಳಿ ಬಂಧನ!
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ರೀಲ್ಗಳನ್ನು ಮಾಡುವ ವಿಚಿತ್ರ ಕ್ರೇಜ್ ಇದೆ. ಖ್ಯಾತಿ ಪಡೆಯಲು ಜನರು ವಿಚಿತ್ರವಾದದ್ದನ್ನು ಮಾಡಲು ಸಿದ್ಧರಿದ್ದಾರೆ. ಡೆಹ್ರಾಡೂನ್ನ ಮಹಿಳೆಯೊಬ್ಬರು ಇನ್ಸ್ಟಾಗ್ರಾಮ್ ರೀಲ್ ಅನ್ನು ಪೋಸ್ಟ್ ಮಾಡಿದ್ದು ಆ ರೀಲ್ ಮೂಲಕ ಕಳ್ಳಿಯೊಬ್ಬಳು ಸಿಕ್ಕಿಬಿದ್ದಿದ್ದಾಳೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ರೀಲ್ಗಳನ್ನು ಮಾಡುವ ವಿಚಿತ್ರ ಕ್ರೇಜ್ ಇದೆ. ಖ್ಯಾತಿ ಪಡೆಯಲು ಜನರು ವಿಚಿತ್ರವಾದದ್ದನ್ನು ಮಾಡಲು ಸಿದ್ಧರಿದ್ದಾರೆ. ಡೆಹ್ರಾಡೂನ್ನ ಮಹಿಳೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ರೀಲ್ ಅನ್ನು ಪೋಸ್ಟ್ ಮಾಡಿದ್ದು ಆ ರೀಲ್ ಮೂಲಕ ಕಳ್ಳಿಯೊಬ್ಬಳು
new waves technology
Jul 41 min read


ಗೋವಾದಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಬಂದ್: ತೀವ್ರ ಆತಂಕದಲ್ಲಿ ಕನ್ನಡಿಗರು, ಸಚಿವ ಸತೀಶ್ ಜಾರಕಿಹೊಳಿ ಏನೆಂದರು?
ಗೋವಾದಲ್ಲಿನ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂಬ ವರದಿಗಳು ಕರ್ನಾಟಕದಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿವೆ. ಬೆಂಗಳೂರು: ಗೋವಾದಲ್ಲಿನ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂಬ ವರದಿಗಳು ಕರ್ನಾಟಕದಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿವೆ. ಶಿಕ್ಷಣ ತಜ್ಞರು, ರಾಜಕಾರಣಿಗಳು ಹಾಗೂ ಕನ್ನಡಪರ ಹೋರಾಟಗಾರರು ಈ ವಿಷಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದ್ದು, ಇದು ಕೇವಲ ಶಿಕ್ಷಣದ ಪ್ರಶ್ನೆಯಲ್ಲ, ಗಡಿ ರಾಜ್ಯದಲ್ಲಿ ವಾಸಿಸುವ ಸಾವಿರಾರು ಕನ್ನಡಿಗರ ಭಾಷಾ ಹಾಗೂ ಸಾಂಸ್ಕೃತಿಕ ಹಕ್ಕುಗಳಿಗೆ ಸಂಬಂಧಿಸಿದ ವಿಷಯವಾಗಿದೆ ಎಂದು
new waves technology
Jul 42 min read


ಕುಟುಂಬ ಸಮೇತ ಸಿದ್ದರಾಮಯ್ಯ ಭೇಟಿ ಮಾಡಿದ ಸಿಎಂ ಡಿಕೆ ಶಿವಕುಮಾರ್: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ; ಜು. 8ಕ್ಕೆ ದೆಹಲಿಯಲ್ಲಿ ರಾಹುಲ್ ಭೇಟಿ!
ಅಧಿಕಾರದ ಸುಗಮ ವರ್ಗಾವಣೆಯ ನಂತರ ಒಂದು ತಿಂಗಳು ಅಧಿಕಾರ ಪೂರ್ಣಗೊಂಡಿದ್ದಕ್ಕಾಗಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಲು ಶಿವಕುಮಾರ್ ಸೌಜನ್ಯಯುತ ಭೇಟಿ ನೀಡಿದ್ದರು. ಬೆಂಗಳೂರು: ರಾಜ್ಯ ಸಚಿವ ಸಂಪುಟವು 15 ದಿನಗಳ ಕಾಲ ನಡೆಯಲಿರುವ ವಿಧಾನಸಭೆಯ ಮಳೆಗಾಲದ ಅಧಿವೇಶನವನ್ನು ಆಗಸ್ಟ್ಗೆ ಮುಂದೂಡಲು ನಿರ್ಧರಿಸಿದ್ದರೂ, ಜುಲೈ 10 ರಿಂದ 14 ರ ನಡುವೆ ಯಾವುದೇ ಸಮಯದಲ್ಲಿ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ಗೆ ಬಲ್ಲ ಮೂಲಗಳು ತಿಳಿಸಿವೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜುಲೈ 8 ರಂದು ಭಾರತಕ್ಕೆ ಮರಳುವ ನಿರೀಕ್ಷೆಯಿದ್ದು, ನಂತರ ಮುಖ್ಯ
new waves technology
Jul 41 min read


'ಅವರಿಗೆ ಅವಕಾಶ ಸಿಗದಿರುವುದು ದುರದೃಷ್ಟಕರ': ಟೀಂ ಇಂಡಿಯಾದ ನಿಲುವಿಗೆ RCB ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್ ಕಿಡಿ
ಐರ್ಲೆಂಡ್ ವಿರುದ್ಧದ ಸರಣಿಯನ್ನು 2-0 ಅಂತರದಿಂದ ಸೋತ ನಂತರ, ಭಾರತ ತಂಡ ಇಂಗ್ಲೆಂಡ್ ಪ್ರವಾಸದಲ್ಲಿ ಇನ್ನೂ ಗೆಲುವಿನ ರುಚಿ ನೋಡಿಲ್ಲ. ಅವರ ಮೊದಲ ಟಿ20ಐ ಮಳೆಯಿಂದ ರದ್ದಾಗಿದೆ. ಭಾರತೀಯ ಕ್ರಿಕೆಟ್ ತಂಡಕ್ಕೆ 15 ವರ್ಷದ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಆಯ್ಕೆಯಾಗಿದ್ದರೂ, ಐರ್ಲೆಂಡ್ ಮತ್ತು ಸದ್ಯ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿಗೆ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದಿಲ್ಲ. ಇದೀಗ ಕ್ರಿಕೆಟ್ ಜಗತ್ತಿನಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. 2026ರ ಟಿ20 ವಿಶ್ವಕಪ್ ಹೀರೋ ಸಂಜು ಸ್ಯಾಮ್ಸನ್ ಸತತ ಮೂರು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರ
new waves technology
Jul 32 min read


Video: ಕಳ್ಳ ಮತದಾರರ ಒಂದು ಕಡೆ ಕೂರಿಸಿ SIR ಮಾಡುತ್ತಿದ್ದಾರೆ: HD Kumaraswamy
ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಆರಂಭವಾಗಿದೆ. ಜುಲೈ 29 ರವರೆಗೆ ಬಿಎಲ್ಓಗಳು ಮನೆ ಮನೆಗೆ ಭೇಟಿ ನೀಡಲಿದ್ದು, ಪರಿಷ್ಕರಣೆ ನಡೆಸಲಿದ್ದಾರೆ. ರಾಮನಗರ: ರಾಜ್ಯದಲ್ಲಿ ಜೂನ್ 30ರಿಂದ ಮತ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದ್ದು, ರಾಜ್ಯಾದ್ಯಂತ ಭರ್ಜರಿ ಪ್ರತಿಕ್ರಿಯೆ ದೊರೆಯುತ್ತಿದೆ. ಈ ನಡುವೆ ಎಸ್ ಐಆರ್ ಪ್ರಕ್ರಿಯೆಲ್ಲಿ ಕರ್ನಾಟಕ ಸರ್ಕಾರ ಗಂಭೀರ ಲೋಪವೆಸಗುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ. ಹೌದು.. ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಆರಂಭವಾಗಿದೆ. ಜುಲೈ 29 ರವರೆಗೆ ಬಿಎಲ್ಓಗ
new waves technology
Jul 32 min read


ರಷ್ಯಾದಿಂದಲೇ ತೈಲ ತಂದು, ರಷ್ಯಾಕ್ಕೇ ಪೆಟ್ರೋಲ್ ಮಾರಾಟ...? ಏನಿದು ಭಾರತದ ರಿಫೈನರಿಗಳ ‘ಉಲ್ಟಾ’ ಗೇಮ್? ಕೇಂದ್ರ ಸರ್ಕಾರ ಹೇಳಿದ್ದೇನು..?
ಸುಮಾರು 60,000 ಮೆಟ್ರಿಕ್ ಟನ್ ಪೆಟ್ರೋಲ್ ಈಗಾಗಲೇ ರವಾನೆಯಾಗಿದ್ದು, ಇನ್ನೂ ಎರಡು ಟ್ಯಾಂಕರ್ಗಳಲ್ಲಿ ತಲಾ 30,000–40,000 ಟನ್ ಪೆಟ್ರೋಲ್ ಕಳುಹಿಸಲಾಗಿದೆ ಎಂಬ ಮಾಹಿತಿಯೂ ವರದಿಯಾಗಿತ್ತು. ನವದೆಹಲಿ: ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವ ಭಾರತ, ಅದನ್ನೇ ಸಂಸ್ಕರಿಸಿ ಮತ್ತೆ ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿದೆ ಎಂಬ ವರದಿಗಳು ಇತ್ತೀಚೆಗೆ ಚರ್ಚೆಗೆ ಗ್ರಾಸವಾಗಿವೆ. ಈ ಬೆಳವಣಿಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, "ರಷ್ಯಾದಿಂದ ತೈಲ ತಂದು ಮತ್ತೆ ರಷ್ಯಾಕ್ಕೇ ಪೆಟ್ರೋಲ್ ಮಾರಾಟ ಮಾಡಲಾಗುತ್ತಿದೆಯೇ?" ಎಂಬ ಕುತೂಹಲ ಮೂಡಿಸಿದೆ. ಆದರೆ ಈ ಬಗ್ಗೆ ಕೇಂ
new waves technology
Jul 31 min read


ಬಾಯಿ ಕ್ಯಾನ್ಸರ್ ಗೆ ಅಲ್ಟ್ರಾಸೌಂಡ್ ಚಿಕಿತ್ಸೆ: ಸಂಶೋಧಕರು, ತಜ್ಞರಿಂದ ಭರವಸೆ
ಬಾಯಿಯ ಕ್ಯಾನ್ಸರ್ ಕೋಶಗಳು ಅಲ್ಟ್ರಾಸೌಂಡ್ನಿಂದ ಉಂಟಾಗುವ ಮಧ್ಯಮ ಮಟ್ಟದ ಯಾಂತ್ರಿಕ ಪ್ರಚೋದನೆಗಳಿಗೆ (Mechanical stimulation) ಹೆಚ್ಚು ದುರ್ಬಲವಾಗಿರುತ್ತವೆ. ಈ ರೀತಿಯ ಅಲ್ಟ್ರಾಸೌಂಡ್ ಪ್ರಚೋದನೆಗೆ ಒಳಪಡಿಸಿದಾಗ ಕ್ಯಾನ್ಸರ್ ಕೋಶಗಳು ಆಯ್ದ ರೀತಿಯಲ್ಲಿ ನಾಶವಾಗುತ್ತವೆ. ಬೆಂಗಳೂರು: ಬಾಯಿ ಕ್ಯಾನ್ಸರ್ಗೆ ಹೊಸ ಚಿಕಿತ್ಸಾ ಮಾರ್ಗ ಕಂಡುಹಿಡಿಯುವ ನಿಟ್ಟಿನಲ್ಲಿ, ಭಾರತೀಯ ವಿಜ್ಞಾನ ಸಂಸ್ಥೆ (IISc) ಮತ್ತು ಎಂ.ಎಸ್. ರಾಮಯ್ಯ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಸಂಶೋಧಕರು ಕಡಿಮೆ ಆವರ್ತನದ (Low frequency) ಅಲ್ಟ್ರಾಸೌಂಡ್ ತಂತ್ರಜ್ಞಾನದ ಮೇಲೆ ಭರವಸೆ ಇಟ್ಟಿದ್ದಾರೆ. ಸಂಶೋಧನೆಯ ಪ್
new waves technology
Jul 31 min read


ಅಮೆರಿಕವೇ ಹೆಚ್ಚು ಖರ್ಚು ಮಾಡುತ್ತಿದ್ದರೂ ಕಷ್ಟದ ಸಮಯದಲ್ಲಿ ಕೈಕೊಟ್ಟರು: ಏಕಪಕ್ಷೀಯ ಸಂಬಂಧ ಮುಂದುವರಿಸುವುದು ಹಾಸ್ಯಾಸ್ಪದ: NATO ವಿರುದ್ಧ ಟ್ರಂಪ್ ಆಕ್ರೋಶ
ಸಂಕಷ್ಟದ ಸಮಯದಲ್ಲಿ ಮಿತ್ರ ರಾಷ್ಟ್ರಗಳು ಅಮೆರಿಕದ ಬೆಂಬಲಕ್ಕೆ ಬರಲಿಲ್ಲ. ಇದೇ ಕಾರಣಕ್ಕೆ ಅಮೆರಿಕ ಮಾತ್ರ ನ್ಯಾಟೋ ರಕ್ಷಣೆಯ ಭಾರವನ್ನು ಹೊರುವುದು ಸರಿಯಲ್ಲ. ವಾಷಿಂಗ್ಟನ್: ನ್ಯಾಟೋ (NATO)ಗೆ ಅಮೆರಿಕ ನೀಡುತ್ತಿರುವ ಪ್ರಸ್ತುತ ಬೆಂಬಲ "ಏಕಪಕ್ಷೀಯ"ವಾಗಿದ್ದು, ಅದೇ ರೀತಿಯ ಸಂಬಂಧವನ್ನು ಮುಂದುವರಿಸುವುದು "ಹಾಸ್ಯಾಸ್ಪದ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜುಲೈ 7 ಮತ್ತು 8ರಂದು ನಡೆಯಲಿರುವ ನ್ಯಾಟೋ ಶೃಂಗಸಭೆಗೆ ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಟ್ರಂಪ್ ಅವರ ಈ ಹೇಳಿಕೆ ಜಾಗತಿಕ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ತಮ್ಮ ಸಾಮಾಜಿಕ
new waves technology
Jul 32 min read


ಮೊದಲ ಬಾರಿಗೆ ಕಿರುತೆರೆಗೆ ಬಿ.ಸಿ ಪಾಟೀಲ್ ಎಂಟ್ರಿ: ‘ಶ್ರೀ ರಾಘವೇಂದ್ರ ಮಹಾತ್ಮೆ’ ಮೂಲಕ ಮಾಜಿ ಸಚಿವರ ಹೊಸ ಇನ್ನಿಂಗ್ಸ್!
ಸದಾ ವಿಭಿನ್ನ ಸಿನಿಮಾಗಳ ಮೂಲಕ ಅಬ್ಬರಿಸುತ್ತಿದ್ದ ‘ಕೌರವ’ ಬಿ.ಸಿ. ಪಾಟೀಲ್ ಅವರನ್ನು ಈಗ ರಾಯರ ಮಹಿಮೆಯ ಕಥಾಹಂದರದಲ್ಲಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ. ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಬಿ.ಸಿ. ಪಾಟೀಲ್ ಅವರು ಇದೇ ಮೊದಲ ಬಾರಿಗೆ ಕಿರುತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಜೀ ಕನ್ನಡ ವಾಹಿನಿಯ ಜನಪ್ರಿಯ ಭಕ್ತಿ ಪ್ರಧಾನ ಧಾರಾವಾಹಿ ‘ಶ್ರೀ ರಾಘವೇಂದ್ರ ಮಹಾತ್ಮೆ’ ಮೂಲಕ ಅವರು ಹೊಚ್ಚಹೊಸ ಇನಿಂಗ್ಸ್ ಆರಂಭಿಸುತ್ತಿದ್ದಾರೆ. ವೀಕ್ಷಕರ ಮನಗೆದ್ದಿರುವ ಈ ಸರಣಿಯಲ್ಲಿ ಬಿ.ಸಿ. ಪಾಟೀಲ್ ಅವರು ಅತ್ಯಂತ ಪ್ರಮುಖವಾದ ‘ಕರಟಗಿರಿಯ ದೇಸಾಯಿ’ ಎಂಬ ಪಾ
new waves technology
Jul 21 min read


MI ನಾಯಕ ಹಾರ್ದಿಕ್ ಪಾಂಡ್ಯ ಪಡೆಯಲು 7 ಫ್ರಾಂಚೈಸಿಗಳ ಪೈಪೋಟಿ; ಸ್ಪರ್ಧೆಯಿಂದ ಹೊರಗುಳಿದ ಎರಡು ತಂಡಗಳು!
ಆಸಕ್ತ ಫ್ರಾಂಚೈಸಿಗಳಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ (CSK) ಮುಂಚೂಣಿಯಲ್ಲಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ಗೆ (KKR) ಕಠಿಣ ಪೈಪೋಟಿ ನೀಡಿದೆ. ರಾಜಸ್ಥಾನ್ ರಾಯಲ್ಸ್ (RR) ಕೂಡ ಗಂಭೀರ ಸ್ಪರ್ಧಿಗಳಲ್ಲಿ ಒಂದಾಗಿದೆ ಎಂದು ವರದಿ ಹೇಳಿದೆ. ಐಪಿಎಲ್ 2026ರಲ್ಲಿ ತಂಡದ ಕಳಪೆ ಪ್ರದರ್ಶನದ ನಂತರ ಮುಂಬೈ ಇಂಡಿಯನ್ಸ್ (MI) ನಾಯಕ ಹಾರ್ದಿಕ್ ಪಾಂಡ್ಯ ಫ್ರಾಂಚೈಸಿಯನ್ನು ತೊರೆಯಲಿದ್ದಾರೆ ಎಂದು ವರದಿಯಾಗಿದೆ. ಸ್ಟಾರ್ ಆಲ್ರೌಂಡರ್ 2015ರಲ್ಲಿ ಮುಂಬೈ ತಂಡದೊಂದಿಗೆ ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು 2021ರವರೆಗೆ ತಂಡಕ್ಕಾಗಿ ಆಡಿದರು. ಮುಂದಿನ ಆವೃತ್ತಿಗೆ ಮ
new waves technology
Jul 21 min read


ಗೃಹಲಕ್ಷ್ಮಿ ಯೋಜನೆ ಅಕ್ರಮಗಳ ತನಿಖೆಗೆ SIT ರಚಿಸಿ: ರಾಜ್ಯ ಸರ್ಕಾರಕ್ಕೆ BJP ಆಗ್ರಹ
ಯೋಜನೆಯಡಿ ಎರಡು ತಿಂಗಳ ಕಾಲ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿರಲಿಲ್ಲ. ಈ ವಿಚಾರ ವಿಧಾನಸಭೆಯಲ್ಲೂ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಆದರೂ ಸರ್ಕಾರ ಯಾವುದೇ ಸ್ಪಷ್ಟ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು. ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಬುಧವಾರ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆಯಡಿ ನಕಲಿ ಬ್ಯಾಂಕ್ ಖಾತೆಗಳಿಗೆ ಹಾಗೂ ಮೃತಪಟ್ಟ ಫಲಾನುಭವಿಗಳ ಖಾತೆಗಳಿಗ
new waves technology
Jul 21 min read


'ದೇಶ ವಿಭಜನೆಯ ಬಳಿಕ ಭಾರತಕ್ಕೆ ಬಂದವರು ನಿರಾಶ್ರಿತರಲ್ಲ, ಹೋರಾಟದ ಯೋಧರು'; RSS ಮುಖ್ಯಸ್ಥ ಮೋಹನ್ ಭಾಗವತ್
ಮಾತೃಭೂಮಿಯ ಮೇಲಿನ ಪ್ರೀತಿ ಮತ್ತು ತಮ್ಮ ಧರ್ಮದ ಮೇಲಿನ ನಿಷ್ಠೆಯಿಂದ ಅವರು ಈ ಹೋರಾಟ ನಡೆಸಿದರು. ಭಾರತವನ್ನು ಒಗ್ಗೂಡಿಸಿ ಉಳಿಸಿಕೊಳ್ಳುವ ಹೋರಾಟದಲ್ಲಿ ಸೋತಿದ್ದೇವೆ. ಅದು ಅವರೊಬ್ಬರ ತಪ್ಪಿನಿಂದಲ್ಲ, ನಮ್ಮೆಲ್ಲರ ಸೋಲಾಗಿತ್ತು. ನಾಗ್ಪುರ: 1947ರ ಭಾರತ ವಿಭಜನೆ ಬಳಿಕ ಪಾಕಿಸ್ತಾನದಿಂದ ಭಾರತಕ್ಕೆ ಬಂದವರನ್ನು "ನಿರಾಶ್ರಿತರು (Refugees)" ಎಂದು ಕರೆಯುವುದು ತಪ್ಪು. ಅವರು ತಮ್ಮ ದೇಶ ಮತ್ತು ಧರ್ಮದ ಮೇಲಿನ ಪ್ರೀತಿಯಿಂದ ಎಲ್ಲವನ್ನೂ ತ್ಯಾಗ ಮಾಡಿದ "ಹೋರಾಟದ ಯೋಧರು" ಎಂದು ಆರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಬುಧವಾರ ನಾಗಪುರದಲ್ಲಿ ನಡೆದ ಸಿಂಧು ಎಜುಕೇಶನ್ ಸೊಸೈಟಿಯ 75ನೇ
new waves technology
Jul 21 min read


ಶ'ಪನಾಮ ಕಾಲುವೆ ಬಿಟ್ಟುಕೊಟ್ಟಿದ್ದು ದೊಡ್ಡ ಮೂರ್ಖತನದ ನಿರ್ಧಾರ': ಚೀನಾ ಕಬಳಿಸಲು ಯತ್ನಿಸುತ್ತಿದೆ; ಟ್ರಂಪ್
ಅಮೆರಿಕವು ಪನಾಮ ಕಾಲುವೆಯ ಮೇಲಿನ ಹಕ್ಕನ್ನು ಬಿಟ್ಟುಕೊಟ್ಟ ತಕ್ಷಣವೇ, ಪನಾಮ ಸರ್ಕಾರವು ಹಡಗುಗಳ ಸಂಚಾರ ಶುಲ್ಕವನ್ನು ನಾಲ್ಕು ಪಟ್ಟು ಹೆಚ್ಚಿಸಿತು. ಇದರಿಂದಾಗಿ ಯಾವುದೇ ಟ್ರಾಫಿಕ್ ಕಳೆದುಕೊಳ್ಳದೆ ಪನಾಮಾ ದೇಶವು ಭಾರೀ ಪ್ರಮಾಣದ ಹಣವನ್ನು ಗಳಿಸಿತು. ಅಮೆರಿಕ ದೊಡ್ಡ ಆದಾಯವನ್ನು ಕಳೆದುಕೊಂಡಿತು. ಪನಾಮ ಕಾಲುವೆಯ (Panama Canal) ಮೇಲಿನ ನಿಯಂತ್ರಣವನ್ನು ಪನಾಮಗೆ ಹಸ್ತಾಂತರಿಸಿದ ಅಮೆರಿಕದ ಹಿಂದಿನ ನಿರ್ಧಾರವನ್ನು "ದೊಡ್ಡ ಮೂರ್ಖತನ" ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಟೀಕಿಸಿದ್ದಾರೆ. ಅಲ್ಲದೆ, ಈ ಮಹತ್ವದ ಜಲಮಾರ್ಗದ ಮೇಲೆ ಚೀನಾ ತನ್ನ ಪ್ರಭಾವವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದ
new waves technology
Jul 22 min read


ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ; ಇಂದಿನಿಂದ ಹೊಸ ದರ ಜಾರಿ, ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು..?
19 ಕೆ.ಜಿ. ತೂಕದ ವಾಣಿಜ್ಯ LPG ಸಿಲಿಂಡರ್ ಬೆಲೆಯನ್ನು ರೂ.183.50 ಇಳಿಕೆ ಮಾಡಲಾಗಿದ್ದು, ಹೊಸ ದರಗಳು ಜುಲೈ 1, 2026ರಿಂದ ಜಾರಿಗೆ ಬಂದಿವೆ. ನವದೆಹಲಿ: ವಾಣಿಜ್ಯ ಬಳಕೆಯ ಎಲ್ಪಿಜಿ (LPG) ಸಿಲಿಂಡರ್ ಬಳಸುವ ಹೋಟೆಲ್ಗಳು, ರೆಸ್ಟೋರೆಂಟ್ಗಳು, ಡಾಬಾಗಳು ಹಾಗೂ ಆಹಾರ ಮತ್ತು ಪಾನೀಯ ಉದ್ಯಮಗಳಿಗೆ ಕೇಂದ್ರ ಸರ್ಕಾರ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಭಾರೀ ನಿರಾಳ ನೀಡಿವೆ. 19 ಕೆ.ಜಿ. ತೂಕದ ವಾಣಿಜ್ಯ LPG ಸಿಲಿಂಡರ್ ಬೆಲೆಯನ್ನು ರೂ.183.50 ಇಳಿಕೆ ಮಾಡಲಾಗಿದ್ದು, ಹೊಸ ದರಗಳು ಜುಲೈ 1, 2026ರಿಂದ ಜಾರಿಗೆ ಬಂದಿವೆ. ಇತ್ತೀಚಿನ ದರ ಪರಿಷ್ಕರಣೆಯ ಬಳಿಕ 19 ಕೆ.ಜಿ. ವಾಣಿಜ್ಯ LPG ಸಿಲಿಂಡರ್ ಬೆ
new waves technology
Jul 12 min read


ವೈಭವ್ ಸೂರ್ಯವಂಶಿ ಐರ್ಲೆಂಡ್ ವಿರುದ್ಧ ಚೊಚ್ಚಲ ಪಂದ್ಯ ಆಡದಿರುವುದು ಒಳ್ಳೆಯದಾಯಿತು; ಆರ್ ಅಶ್ವಿನ್
ಚೆಂಡು ಸ್ವಿಂಗ್ ಆಗುವ ಅಥವಾ ವೇಗದ ಬೌಲರ್ಗಳಿಗೆ ನೆರವಾಗುವಂತಹ ಪಿಚ್ಗಳಲ್ಲಿ ಆಕ್ರಮಣಕಾರಿ ಶೈಲಿಯ ಟಿ20 ಕ್ರಿಕೆಟ್ ಆಡಲು ಪ್ರಯತ್ನಿಸಿದಾಗ ವಿಫಲಗೊಳ್ಳುವ ಸಾಧ್ಯತೆಗಳು ಹೆಚ್ಚಿರುತ್ತವೆ ಎಂದು ಅಶ್ವಿನ್ ಹೇಳಿದರು. ಇತ್ತೀಚೆಗೆ ನಡೆದ ಐರ್ಲೆಂಡ್ ವಿರುದ್ಧದ ಟಿ20ಐ ಸರಣಿಯಲ್ಲಿ 15 ವರ್ಷ ಯುವ ಆಟಗಾರ ವೈಭವ್ ಸೂರ್ಯವಂಶಿಗೆ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ನೀಡಿಲ್ಲ. ಆ ಸರಣಿಯಲ್ಲಿ ಭಾರತ 0-2 ಅಂತರದಲ್ಲಿ ಆಘಾತಕಾರಿ ಸೋಲು ಕಂಡಿತು. ಬಳಿಕ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಬಗ್ಗೆ ಕೂಗುಗಳು ಹೆಚ್ಚಿವೆ. ಆದಾಗ್ಯೂ, ಭಾರತದ ದಂತಕಥೆ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಈ ವಿಷಯಕ್ಕ
new waves technology
Jul 11 min read


ಮಣ್ಣಿನ ಫಲವತ್ತತೆ ಕೊರತೆ: UAS-GKVK ವಿಜ್ಞಾನಿಗಳಿಂದ ಬಯೋಚಾರ್ ತಂತ್ರಜ್ಞಾನ ಅಭಿವೃದ್ಧಿ, ಏನಿದು?
ಸಣ್ಣ ಮತ್ತು ಅತಿಸಣ್ಣ ಮಟ್ಟದ ರೈತರು ಮಣ್ಣಿನ ಪೋಷಕಾಂಶವನ್ನು ಹೆಚ್ಚಿಸಿಕೊಳ್ಳಲು ನೆರವಾಗುವ ಕಡಿಮೆ ವೆಚ್ಚದ ಬಯೋಚಾರ್ (Biochar) ತಂತ್ರಜ್ಞಾನವನ್ನು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಧಾರವಾಡ (UAE) ಮತ್ತು ಗಾಂಧಿ ಕೃಷಿ ವಿಜ್ಞಾನ ಕೇಂದ್ರ (GKVK), ಬೆಂಗಳೂರು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ. ಹುಬ್ಬಳ್ಳಿ: ಸಣ್ಣ ಮತ್ತು ಅತಿಸಣ್ಣ ಮಟ್ಟದ ರೈತರು ಮಣ್ಣಿನ ಪೋಷಕಾಂಶವನ್ನು ಹೆಚ್ಚಿಸಿಕೊಳ್ಳಲು ನೆರವಾಗುವ ಕಡಿಮೆ ವೆಚ್ಚದ ಬಯೋಚಾರ್ (Biochar) ತಂತ್ರಜ್ಞಾನವನ್ನು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಧಾರವಾಡ (UAS) ಮತ್ತು ಗಾಂಧಿ ಕೃಷಿ ವಿಜ್ಞಾನ ಕೇಂದ್ರ (GKVK), ಬೆಂಗಳೂರು ವಿಜ್ಞ
new waves technology
Jul 12 min read


ಇಲಾಖೆಗಳ ನಡುವಿನ ತಡೆಗೋಡೆ ಒಡೆಯಿರಿ, ಒಂದೇ ತಂಡವಾಗಿ ಕೆಲಸ ಮಾಡಿ: ಕೇಂದ್ರ ಅಧಿಕಾರಿಗಳಿಗೆ ಪ್ರಧಾನಿ ಮೋದಿ ಖಡಕ್ ಸೂಚನೆ..!
ಸಭೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬ ಕಾರ್ಯದರ್ಶಿಯೂ ತಮ್ಮ ಇಲಾಖೆಯ ಕಾರ್ಯಚಟುವಟಿಕೆಗಳು, ಸುಧಾರಣಾ ಕ್ರಮಗಳು ಹಾಗೂ ಮುಂದಿನ ಯೋಜನೆಗಳ ಕುರಿತು ಪ್ರಧಾನಿಗೆ ಪ್ರತ್ಯೇಕವಾಗಿ ಪ್ರಸ್ತುತಿ ನೀಡಿದರು. ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ನಡುವೆ ಸಮನ್ವಯವನ್ನು ಮತ್ತಷ್ಟು ಬಲಪಡಿಸಿ, ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವ ಬದಲು 'ಸಂಪೂರ್ಣ ಸರ್ಕಾರದ (Whole of the Government)' ದೃಷ್ಟಿಕೋನವನ್ನು ಅಳವಡಿಸಿಕೊಳ್ಳಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಂಗಳವಾರ ನವದೆಹಲಿಯ ಸೇವಾ ತೀರ್ಥ (Seva Teerth)ದಲ್ಲಿ ನ
new waves technology
Jul 12 min read
bottom of page

