ರಕ್ತಸಿಕ್ತವಾಯ್ತು Party Time: ಕ್ಷುಲಕ್ಕ ಕಾರಣಕ್ಕೆ ಶುರುವಾದ ಜಗಳದಲ್ಲಿ ಆಪ್ತ ಸ್ನೇಹಿತನ ಕಿವಿಯನ್ನು ಕಚ್ಚಿ ನುಂಗಿದ ಭೂಪ!
- new waves technology
- Feb 27
- 1 min read
ವಾದ ವಿಕೋಪಕ್ಕೆ ತಿರುಗಿದ್ದು ವಿಕಾಸ್ ಮೆನನ್ ವ್ಯಾಘ್ರನಾಗಿದ್ದಾನೆ. ಕೋಪದಲ್ಲಿ ವಿಕಾಸ್, ಶ್ರವಣ್ ಲಿಖಾನ ಕಿವಿಯ ಒಂದು ಭಾಗವನ್ನು ಬಾಯಿಯಿಂದ ಕಚ್ಚಿದ್ದಾನೆ.

ಮುಂಬೈ: ಮಹಾರಾಷ್ಟ್ರದ ಥಾಣೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಥಾಣೆಯ ಪಟ್ಲಿಪಾಡ ಪ್ರದೇಶದಲ್ಲಿ ವ್ಯಕ್ತಿಯೋರ್ವ ತನ್ನ ಸ್ನೇಹಿತನ ಕಿವಿಯ ಒಂದು ಭಾಗವನ್ನು ಕಚ್ಚಿ ನುಂಗಿದ್ದಾನೆ. ದೂರು ಬಂದ ಬೆನ್ನಲ್ಲೇ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಆರೋಪಿಯನ್ನು ಬಂಧಿಸಿಲ್ಲ.
ಈ ಘಟನೆ ಪಾರ್ಟಿಯ ಸಮಯದಲ್ಲಿ ನಡೆದಿದೆ. ಪಾರ್ಟಿಗಾಗಿ 37 ವರ್ಷದ ಶ್ರವಣ್ ಲೇಖಾ ಮತ್ತು 32 ವರ್ಷದ ವಿಕಾಸ್ ಮೆನನ್ ಮತ್ತು ಅವರ ಇತರ ಸ್ನೇಹಿತರು ಸೇರಿದ್ದರು. ಮೊದಲಿಗೆ ಎಲ್ಲವೂ ಚೆನ್ನಾಗಿ ನಡೆಯುತ್ತಿತ್ತು. ಆದರೆ ಇದ್ದಕ್ಕಿದ್ದಂತೆ ಇಬ್ಬರ ನಡುವೆ ಯಾವುದೋ ವಿಷಯದ ಬಗ್ಗೆ ಚರ್ಚೆ ಶುರುವಾಯಿತು. ವಾದ ವಿಕೋಪಕ್ಕೆ ತಿರುಗಿದ್ದು ವಿಕಾಸ್ ಮೆನನ್ ವ್ಯಾಘ್ರನಾಗಿದ್ದಾನೆ. ಕೋಪದಲ್ಲಿ ವಿಕಾಸ್, ಶ್ರವಣ್ ಲಿಖಾನ ಕಿವಿಯ ಒಂದು ಭಾಗವನ್ನು ಬಾಯಿಯಿಂದ ಕಚ್ಚಿದ್ದಾನೆ. ಜಗಳ ಇಲ್ಲಿಗೆ ಮುಗಿಯಲಿಲ್ಲ. ಕೋಪದಿಂದ ನಿಯಂತ್ರಣ ತಪ್ಪಿದ ವಿಕಾಸ್ ಮೆನನ್, ತನ್ನ ಕತ್ತರಿಸಿದ ಕಿವಿಯ ತುಂಡನ್ನು ಸಹ ನುಂಗಿದ್ದಾನೆ. ಈ ಅನಿರೀಕ್ಷಿತ ದಾಳಿಯಿಂದ ಪಾರ್ಟಿಯಲ್ಲಿದ್ದ ಇತರ ಜನರು ಕೂಡ ಆಘಾತಕ್ಕೊಳಗಾದರು. ಗಾಯಗೊಂಡ ಶ್ರವಣ್ ಲೇಖಾ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು.
ಈ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಕಾರ್ಯಪ್ರವೃತ್ತರಾದ ಕಾಸರ್ವಾಡವಲಿ ಠಾಣೆ ಪೊಲೀಸರು ವಿಕಾಸ್ ಮೆನನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸ್ವಯಂಪ್ರೇರಣೆಯಿಂದ ಗಂಭೀರ ಗಾಯಗೊಳಿಸಿದ್ದಕ್ಕಾಗಿ ಭಾರತೀಯ ದಂಡ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 117(2)ರ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಸ್ತುತ, ಪೊಲೀಸರು ಇಡೀ ವಿಷಯವನ್ನು ಆಳವಾಗಿ ತನಿಖೆ ನಡೆಸುತ್ತಿದ್ದಾರೆ ಮತ್ತು ಜಗಳದ ಹಿಂದಿನ ನಿಜವಾದ ಕಾರಣ ಏನೆಂದು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಆರೋಪಿ ವಿಕಾಸ್ ಮೆನನ್ ನನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ಆದರೆ ಪೊಲೀಸರು ಅವನನ್ನು ಶೀಘ್ರದಲ್ಲೇ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ.
Comments