ಇದು ಗೃಹಲಕ್ಷ್ಮಿಯಲ್ಲ, ಕಾಂಗ್ರೆಸ್ನ ಹಗರಣಲಕ್ಷ್ಮಿ; ಅಸಾಧ್ಯಗಳೆಲ್ಲವೂ ಸಾಧ್ಯವಾಗಿರುವ ಈ ಹಗರಣದ ಹಿಂದೆ ದೊಡ್ಡವರ "ಕೈ" ಇರುವುದು ಖಚಿತ..!
- new waves technology
- 2 hours ago
- 1 min read

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಕುರಿತು ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ವರದಿ (ಸಿಎಜಿ) ವರದಿಯನ್ನು ಉಲ್ಲೇಖಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.
ಇದು ಗೃಹಲಕ್ಷ್ಮಿಯಲ್ಲ, ಕಾಂಗ್ರೆಸ್ನ ಹಗರಣಲಕ್ಷ್ಮಿ" ಎಂದು ಆರೋಪಿಸಿರುವ ಬಿಜೆಪಿ, ಯೋಜನೆಯ ಅನುಷ್ಠಾನದಲ್ಲಿ ಭಾರೀ ಅಕ್ರಮಗಳು ನಡೆದಿವೆ ಎಂದು ಹೇಳಿದೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ (X) ಪೋಸ್ಟ್ ಮಾಡಿರುವ ಬಿಜೆಪಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯೊಬ್ಬರಿಗೆ ಕನಿಷ್ಠ ಒಂದು ಬ್ಯಾಂಕ್ ಖಾತೆಯಾದರೂ ಇರಬೇಕು. ಆದರೆ, ಬ್ಯಾಂಕ್ ಖಾತೆಯೇ ಇಲ್ಲದ 23,262 ಮಂದಿಗೆ ಗೃಹಲಕ್ಷ್ಮಿ ಹಣ ಜಮೆಯಾಗಿದೆ ಎಂದು ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇದಷ್ಟೇ ಅಲ್ಲದೆ, ಒಂದೇ ಬ್ಯಾಂಕ್ ಖಾತೆಯ ಮೂಲಕ 19,020 ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗಿದೆ ಎಂದೂ ಸಿಎಜಿ ವರದಿ ಹೇಳಿದೆ.
ಈ ಬೆಳವಣಿಗೆಗಳನ್ನು ಗಮನಿಸಿದರೆ, "ಅಸಾಧ್ಯಗಳೆಲ್ಲವೂ ಸಾಧ್ಯವಾಗಿರುವ ಈ ಹಗರಣದ ಹಿಂದೆ ದೊಡ್ಡವರ 'ಕೈ' ಇರುವುದು ಖಚಿತ-ನಿಶ್ಚಿತ-ಖಂಡಿತ ಅಲ್ಲವೇ?" ಎಂದು ವಾಗ್ದಾಳಿ ನಡೆಸಿದೆ.
ಗೃಹಲಕ್ಷ್ಮಿ ಯೋಜನೆಯಲ್ಲಿ ನಡೆದಿರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದೂ ಆಗ್ರಹಿಸಿದೆ.





Comments