top of page
ಬೆಂಗಳೂರು


ವಿಧಾನಸಭೆ: ಸದನದ ಘನತೆ ಕೆಡಿಸಿದ ನಾಯಿ, ಕೋತಿ ಪದ
ಬೆಂಗಳೂರು: 'ಲೇ ಆರೆಸ್ಸೆಸ್ನವಾ ...ಥ ನಿಮ್ಮ... ಅಯೋಗ್ಯರಾ.. ಯಾಕೆ ಕೂಗಾಡ್ತೀರಿ... ನಿಮಗೆ ಬೆಂಕಿ ಹಾಕಾ. ಅಸೆಂಬ್ಲಿಗೆ ಬಂದು ಡಾನ್ಸ್ ಮಾಡ್ತೀರಾ? ನಿಮಗೆ ನಾಚಿಕೆ ಮಾನ ಮರ್ಯಾದೆ ಇಲ್ವಾ? ನಿಮ್ಮಂತ ನೂರು ನಾಯಿಗಳು ಬಂದರೂ ನಾನು ಹೆದರಲ್ಲ...' ಹೀಗೆಂದು ವಿಧಾನಸಭೆಯಲ್ಲಿ ಬಿಜೆಪಿಯ ಸದಸ್ಯರ ವಿರುದ್ಧ ಕೂಗಾಡಿದ್ದು ಕಾಂಗ್ರೆಸ್ನ ಕೆ.ಎಂ.ಶಿವಲಿಂಗೇಗೌಡ, 'ವಿಬಿ ಜಿ ರಾಮ್ ಜಿ' ಕಾಯ್ದೆಯನ್ನು ವಿರೋಧಿಸಿ ಮಂಡಿಸಿದ್ದ ನಿರ್ಣಯದ ಪರ ಮಾತನಾಡಲು ನಿಂತ ತಮಗೆ ಅಡ್ಡಿಪಡಿಸಿದರು ಎಂದು ರೊಚ್ಚಿಗೆದ್ದ ಗೌಡರು ಬಿಜೆಪಿ-ಜೆಡಿಎಸ್ ಸದಸ್ಯರನ್ನು ನಾಯಿ, ಕೋತಿ ಎಂದೆಲ್ಲ ಬೈದಾಡಿದರು. ಶಿವಲಿಂಗೇಗೌಡ ಅವರ ನಿಂದನೆ


ಬೆಂಗಳೂರು ಮೆಟ್ರೊ ಪ್ರಯಾಣ ದರ ಶೇ 5ರಷ್ಟುಏರಿಕೆ: ಸರ್ಕಾರದ ಸಮ್ಮತಿ
ಬೆಂಗಳೂರು: ಒಂದು ವರ್ಷದ ಹಿಂದಷ್ಟೇ 'ನಮ್ಮ ಮೆಟ್ರೊ' ಪ್ರಯಾಣ ದರವನ್ನು ಶೇ 71.5ರಷ್ಟು ಹೆಚ್ಚಳ ಮಾಡಿ ನಾಗರಿಕರಿಗೆ ದುಬಾರಿ ಹೊರೆ ಹೊರಿಸಿದ್ದ ಬಿಎಂಆರ್ಸಿಎಲ್ ಮತ್ತೆ ಶೇ 5ರಷ್ಟು ಹೆಚ್ಚಳ ಮಾಡಲು ನಿರ್ಧರಿಸಿದೆ. ಇದೇ 9ರ ಸೋಮವಾರ ದಿಂದಲೇ ಹೊಸ ದರ ಜಾರಿಗೆ ಬರಲಿದೆ. ದರವು ಕನಿಷ್ಠ ₹1 ಹಾಗೂ ಗರಿಷ್ಠ ₹5ರಷ್ಟು ಹೆಚ್ಚಳವಾಗಲಿದೆ. ಕನಿಷ್ಠ ₹10 ಇರುವ ದರ ₹11ಕ್ಕೆ, ಗರಿಷ್ಠ ₹90 ಇರುವ ದರ ₹95ಕ್ಕೆ ಏರಲಿದೆ. ಬಿಎಂಆರ್ಸಿಎಲ್ ಪ್ರತಿ ವರ್ಷ ಶೇ 5ರಷ್ಟು ಪ್ರಯಾಣದರ ಹೆಚ್ಚಳ ಮಾಡಬಹುದು ಎಂದು ದರ ನಿಗದಿ ಸಮಿತಿ (ಎಫ್ಎಫ್ಸಿ) 2025ರಲ್ಲಿ ಶಿಫಾರಸು ಮಾಡಿತ್ತು. ಈ ಬಗ್ಗೆ ಎರಡು ದಿನಗಳ ಹಿಂದೆ ನಡೆದ


ರಾಜ್ಯಪಾಲರ ಅಂಗಳಕ್ಕೆ ಮತ್ತೆ 'ಒಳ ಮೀಸಲು'
ಬೆಂಗಳೂರು: ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿ ಕಲ್ಪಿಸಲು ರೂಪಿಸಿದ್ದ ಮಸೂದೆ ಕುರಿತು ರಾಜ್ಯಪಾಲರು ಎತ್ತಿದ್ದ ಪ್ರಶ್ನೆಗಳಿಗೆ ವಿವರವಾದ ಸ್ಪಷ್ಟಿಕರಣ ಕೊಟ್ಟಿರುವ ಸರ್ಕಾರ, ಅಂಕಿತಕ್ಕಾಗಿ ಮತ್ತೆ ಮಸೂದೆಯನ್ನು ಲೋಕಭವನಕ್ಕೆ ಕಳುಹಿಸಿದೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳನ್ನು ಮೂರು ಗುಂಪುಗಳಾಗಿ ವರ್ಗೀಕರಿಸಿ ಒಳ ಮೀಸಲಾತಿ ಕಲ್ಪಿಸಲು ಹೊರಡಿಸಿದ್ದ ಆದೇಶಕ್ಕೆ ಕಾನೂನು ಬಲ ನೀಡುವ ಉದ್ದೇಶದಿಂದ 'ಕರ್ನಾಟಕ ಅನುಸೂಚಿತ ಜಾತಿಗಳ (ಉಪ-ವರ್ಗೀಕರಣ) ಮಸೂದೆ- 2025' ಅನ್ನು ಸರ್ಕಾರ ರೂಪಿಸಿತ್ತು. ಬೆಳಗಾವಿಯಲ್ಲಿ ಈಚೆಗೆ ನಡೆದ ಅಧಿವೇಶನದಲ್ಲಿಅನುಮೋದನೆಗೊಂಡಿದ್ದ ಈ ಮಸೂದೆಯನ್ನು ಅಂಕಿತಕ್


ವಿಧಾನಸಭೆ: ವಿಬಿ ಜಿ ರಾಮ್ ಜಿ ವಿರೋಧಿಸಿನಿರ್ಣಯ
ಬೆಂಗಳೂರು: ವಿರೋಧಪಕ್ಷಗಳ ಆಕ್ಷೇಪ ಮತ್ತು ಗದ್ದಲದ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ವಿಬಿ ಜಿ ರಾಮ್ ಜಿ' ಕಾಯ್ದೆ ರದ್ದುಪಡಿಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಿದರು. ನಿರ್ಣಯದ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ ವಿರೋಧ ಪಕ್ಷದ ಸದಸ್ಯರು, 'ಇದು ಸದನದ ನಿರ್ಣಯವಾಗಲು ಸಾಧ್ಯವಿಲ್ಲ. ಅದನ್ನು ನಾವು ಒಪ್ಪುವುದೂ ಇಲ್ಲ. ಕಾಂಗ್ರೆಸ್ ಸರ್ಕಾರದ ನಿರ್ಣಯ ಎಂದು ಬೇಕಾದರೆ ಮಂಡಿಸಿ ನಮ್ಮ ತಕರಾರಿಲ್ಲ' ಎಂದರು. ಆಕ್ಷೇಪಕ್ಕೆ ಜಗ್ಗದ ಮುಖ್ಯಮಂತ್ರಿ ನಿರ್ಣಯವನ್ನು ಓದಿದರು. ಈ ವೇಳೆ ಬಿಜೆಪಿ ಸದಸ್ಯರು ಘೋಷಣೆಗಳನ್ನು ಕೂಗುವ ಮೂಲ


ವಿಧಾನಸಭೆಯಲ್ಲಿ BJP-JDS ಅಹೋರಾತ್ರಿ ಧರಣಿ: ತಿಮ್ಮಾಪುರ ರಾಜೀನಾಮೆಗೆ ಬಿಗಿಪಟ್ಟು
ಬೆಂಗಳೂರು: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದಿರುವ ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಸದಸ್ಯರು ಸದನದಲ್ಲಿ ಮಂಗಳವಾರ ಅಹೋರಾತ್ರಿ ಧರಣಿ ನಡೆಸಿದರು. ಸದನದಲ್ಲಿಯೇ ರಾತ್ರಿಯ ಭೋಜನ ಸೇವಿಸಿದ ನಂತರ, ಅಲ್ಲಿಯೇ ನಿದ್ದೆ ಮಾಡಿದರು. ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಸದನಕ್ಕೆ ಬಂದು ಧರಣಿನಿರತರನ್ನು ಭೇಟಿಮಾಡಿ ಮಾತುಕತೆ ನಡೆಸಿದರು. ಬಳಿಕ ಮಾತನಾಡಿದ ಖಾದರ್, 'ಬಿಜೆಪಿಯವರು ಸದನದಲ್ಲಿ ರಾತ್ರಿಯಿಡೀ ಧರಣಿ ನಡೆಸಲು ತೀರ್ಮಾನಿಸಿದ್ದಾರೆ. ಅವರ ಜೊತೆಗೆ ಮಾತನಾಡಿದ್ದೇನೆ. ಮಾತನಾಡುವುದು ನಮ್ಮ ಕರ್ತವ್ಯ. ಧರಣಿ ನ


ಸಂಪಾದಕೀಯ: ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು: ಘನತೆಯ ಬದುಕಿಗೆ ಮಹತ್ವದ ಹೆಜ್ಜೆ
ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನ ನೀಡಿರುವ ಜೀವಿಸುವ ಹಕ್ಕಿನ ಭಾಗ ಎಂದು ಘೋಷಿಸಿ ಸುಪ್ರೀಂ ಕೋರ್ಟ್ ನೀಡಿರುವ ಮಹತ್ವದ ತೀರ್ಪು ಮಹಿಳೆಯ ಘನತೆಯ ಬದುಕಿನತ್ತ ಇರಿಸಲಾದ ಮತ್ತೊಂದು ಹೊಸ ಹೆಜ್ಜೆ. ಸಂವಿಧಾನದ 21ನೇ ವಿಧಿ ಪ್ರಕಾರ ಬದುಕುವ ಹಕ್ಕೆಂಬುದು ಘನತೆಯಿಂದ ಬದುಕುವ ಹಕ್ಕನ್ನೂ ಒಳಗೊಳ್ಳುತ್ತದೆ. 'ಮುಟ್ಟಿನ ನೈರ್ಮಲ್ಯ ಸೌಕರ್ಯ'ಗಳು ಆರೋಗ್ಯದ ವಿಚಾರ ಮಾತ್ರವಲ್ಲ, ಅದೊಂದು ಸಾಂವಿಧಾನಿಕ ಹಕ್ಕು ಎಂದು ಈ ತೀರ್ಪು ಗುರುತಿಸಿದೆ. ಮುಟ್ಟಿನ ನೈರ್ಮಲ್ಯದ ಸೌಕರ್ಯಗಳು ಹೆಣ್ಣುಮಗುವಿನ ಬದುಕು, ಘನತೆ, ಆರೋಗ್ಯ ಹಾಗೂ ಶಿಕ್ಷಣದ ಹಕ್ಕಿನ ಅಂತರ್ಗತ ಭಾಗ ಎಂದೂ ಕೋರ್ಟ್ ಹೇಳಿದೆ. ಹೀಗಾಗಿ, ಎಲ್ಲ ಶಾಲೆಗಳಲ್


ಧೈರ್ಯವಂತ ಒಬ್ಬನೇ ಬಹುಮತ ಸಾಧಿಸಬಲ್ಲ: ಡಿ.ಕೆ. ಶಿವಕುಮಾರ್
ಬೆಂಗಳೂರು: 'ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. ಇಲ್ಲಿ ಎಲ್ಲವೂ ಸಾಧ್ಯ. ಧೈರ್ಯವಂತ ಒಬ್ಬನೇ ಬಹುಮತ ಸಾಧಿಸಬಲ್ಲ ಎಂಬುದನ್ನು ನಾನು ನಂಬಿದ್ದೇನೆ' ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಲ್ಲಿರುವ ನಡುವೆಯೇ, ಅವರ ಈ ಮಾತು ರಾಜಕೀಯ ವಲಯದಲ್ಲಿ ನಾನಾ ವ್ಯಾಖ್ಯಾನಕ್ಕೆ ಕಾರಣವಾಗಿದೆ. ವಂದನಾ ನಿರ್ಣಯದ ಚರ್ಚೆಗೆ ಸೋಮವಾರ ಉತ್ತರ ನೀಡುತ್ತಿರುವ ಮಧ್ಯೆ ಅಧಿಕಾರ ಹಂಚಿಕೆಯ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಪಕ್ಕದ ಆಸನದಲ್ಲಿ ಕುಳಿತಿದ್ದ ಡಿ.ಕೆ. ಶಿವಕುಮಾರ್ ಕಡೆಗೆ ನೋಡಿ, 'ಸಿಎಂಗೂ ಡಿ.ಕೆ. ಶಿವಕುಮಾರ್ಗೂ ಜಗಳವಿದೆ ಅ


ಜಾತ್ರೆಲಿ ಭರ್ಜರಿ ನೃತ್ಯ ಮಾಡಿದ ಐಪಿಎಸ್ ವಸುಂಧರಾ! ತೆಲಂಗಾಣದ ಮೊನಾಲಿಸಾ ಎಂದ ಜನ
ಬೆಂಗಳೂರು: ತೆಲಂಗಾಣದ ಪ್ರಸಿದ್ದ ಜಾತ್ರಾ ಮಹೋತ್ಸವ ಆಗಿರುವ ಮುಲುಗು ಜಿಲ್ಲೆಯ ತಾಂಡಾವಿ ತಾಲ್ಲೂಕಿನ ಮೇದರಂ 'ಸಮ್ಮಕ್ಕ-ಸರಳಮ್ಮ' ಜಾತ್ರಾ ಮಹೋತ್ಸವ ಭರ್ಜರಿಯಾಗಿ ನಡೆಯುತ್ತಿದ್ದು, ಸುತ್ತಲಿನ ಜಿಲ್ಲೆಗಳ ಜನರಿಗೆ ಪ್ರಸಿದ್ಧ ಜಾತ್ರಾ ಸ್ಥಳವಾಗಿದೆ. ಸಮ್ಮಕ್ಕ-ಸರಳಮ್ಮ ಜಾತ್ರಾ ಮಹೋತ್ಸವದಲ್ಲಿ ಒಬ್ಬ ಯುವ ಐಪಿಎಸ್ ಅಧಿಕಾರಿ ಎಲ್ಲರ ಕೇಂದ್ರ ಬಿಂದುವಾಗಿದ್ದಾರೆ. ಅವರೇ ತೆಲಂಗಾಣದ ಯುವ ಐಪಿಎಸ್ ವಸುಂಧರಾ ಯಾದವ್. ಸದ್ಯ ವಸುಂಧರಾ ಯಾದವ್ ಅವರು ತೆಲಂಗಾಣದ ಕಮ್ಮಂ ಜಿಲ್ಲೆಯ ಕಲ್ಲೂರಿನ ಎಸಿಪಿಯಾಗಿದ್ದಾರೆ. ಇವರಿಗೆ ಸಮ್ಮಕ್ಕ-ಸರಳಮ್ಮ ಜಾತ್ರಾ ಮಹೋತ್ಸವದ ಭದ್ರತಾ ಉಸ್ತುವಾರಿಯನ್ನು ವಹಿಸಲಾಗಿದೆ. -ಜಾತ್ರ


ವಿಲಾಸಿ, ವಿವಾದ, ವಿದಾಯ: ಕಾನ್ಸಿಡೆಂಟ್ ಗ್ರೂಪ್ನ ಸಿ.ಜೆ.ರಾಯ್ ಸಂಕೀರ್ಣ ಬದುಕು
ಬೆಂಗಳೂರು: ಸಾವಿರಾರು ಕೋಟಿಯ ಒಡೆಯನಾಗಿ, ಯಶಸ್ಸಿನ ಉತ್ತುಂಗದಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡ ಕಾನ್ಸಿಡೆಂಟ್ ಗ್ರೂಪ್ನ ಸಿ.ಜೆ. ರಾಯ್ ಅವರ ಸಾವು ಆಘಾತ ಸೃಷ್ಟಿಸಿದೆ. ಅದ್ಭುತ ಯಶಸ್ಸು, ನಿರಂತರ ವಿವಾದಗಳು ಹಾಗೂ ತಮ್ಮ ಸಾರ್ವಜನಿಕ ಗುರುತನ್ನು ಮರಳಿ ಪಡೆಯಲು ಅವರು ಮಾಡುತ್ತಿದ್ದ ಇನ್ನಿಲ್ಲದ ಪ್ರಯತ್ನಗಳು ಕುರಿತ ಚರ್ಚೆಗಳು ಮುನ್ನೆಲೆಗೆ ಬಂದಿವೆ. ರಾಯ್ ಅವರ ಬೇರು ಕರ್ನಾಟಕದ್ದೇ ಆದರೂ, ಜಾಗತಿಕ ಮಟ್ಟದಲ್ಲಿ ವ್ಯಾಪಾರ ವಿಸ್ತರಿಸಿ ರಿಯಲ್ ಎಸ್ಟೇಟ್ನಲ್ಲೇ ಹೆಸರು ಮಾಡಿದವರು. ಬೆಂಗಳೂರಿನ ಕ್ರೈಸ್ಟ್ ಶಾಲೆಯಲ್ಲಿ ಆರಂಭಿಕ ವಿದ್ಯಾಭ್ಯಾಸ, ತುಮಕೂರಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗದ ನಂತರ ಸಣ


ರೈತರಿಗೆ ಶೇ 50ರಷ್ಟು ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್: ಅರ್ಜಿ ಸಲ್ಲಿಕೆ ಹೇಗೆ?
ದೇಶದ ರೈತರು ಅಧುನಿಕ ತಂತ್ರಜ್ಞಾನವನ್ನು ಬಳಸುವ ಮೂಲಕ ಸ್ವಾವಲಂಬಿಗಳಾಗಬೇಕು ಎಂಬುದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯಾಗಿದೆ. ಆದ್ದರಿಂದಲೇ ರೈತರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಸ್ವಂತ ಟ್ರ್ಯಾಕ್ಟರ್ ಇರಬೇಕು ಎಂಬುದು ಪ್ರತಿಯೊಬ್ಬ ರೈತನ ಕನಸಾಗಿದೆ. ಆದರೆ, ಆ ಕನಸನ್ನು ನನಸಾಗಿಸುವುದಕ್ಕೆ ಹಣ ಹೇಗೆ ಹೊಂದಿಸಬೇಕು ಎಂಬುದು ಹಲವರಿಗೆ ಚಿಂತೆಯಾಗಿದೆ. ಆದರೆ, ಇನ್ನು ಮೇಲೆ ಆ ಚಿಂತೆ ಬೇಡ. ನಿಮ್ಮ ಟ್ರ್ಯಾಕ್ಟರ್ ಕನಸನ್ನು ನನಸು ಮಾಡಲು ಕೇಂದ್ರ ಸರ್ಕಾರವೇ ಸಹಾಯ ಮಾಡುತ್ತದೆ. ಟ್ರ್ಯಾಕ್ಟರ್ ಖರೀದಿಸುವುದಕ್ಕೆ ಬರೋಬರಿ ಶೇಕಡ 50ರಷ್ಟು ಸಬ್ಸಿಡಿ (ಸಹಾಯಧನ ನೀಡುತ್ತಿದೆ. ಅಂದರೆ


ಬೆಂಗಳೂರಿನ ಮಾರತಹಳ್ಳಿಯನ್ನು ಮಿನಿ ಆಂಧ್ರ ಎಂದ ತೆಲುಗು ಪಿಲ್ಲಾ.. ಕನ್ನಡಿಗರು ಕೆಂಡ
ಬೆಂಗಳೂರು: ಹೊರರಾಜ್ಯಗಳ ಅನೇಕ ಕಿಡಿಗೇಡಿಗಳು ಬೆಂಗಳೂರಿನಲ್ಲಿ ಕರ್ನಾಟಕಕ್ಕೆ ಕನ್ನಡಕ್ಕೆ ಅವಮಾನ ಆಗುವ ರೀತಿಯಲ್ಲಿ ನಡೆದುಕೊಂಡು ವಾಪಸ್ ಬಿಸಿ ಮುಟ್ಟಿಸಿಕೊಳ್ಳುವುದನ್ನು ಆಗಾಗ ನೋಡುತ್ತಿರುತ್ತೇವೆ. ಇದೀಗ ಇಂತಹದ್ದೇ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ನಡೆದಿರುವುದಾಗಿ ಸಾಮಾಜಿಕ ತಾಣಗಳಲ್ಲಿ ಚರ್ಚೆಯಾಗುತ್ತಿದೆ. ಆಂಧ್ರದ ಯುವತಿಯೊಬ್ಬರದ್ದು ಎನ್ನಲಾದ ವಿಡಿಯೊ ಫೇಸ್ಬುಕ್ ಹಾಗೂ ಎಕ್ಸ್ನಲ್ಲಿ ಬಹಳ ಹರಿದಾಡುತ್ತಿದ್ದು, ಆಕೆ ಕನ್ನಡಿಗರನ್ನು ಕೆಣಕಿರುವುದು ವಿಡಿಯೊದಲ್ಲಿ ಗೊತ್ತಾಗುತ್ತದೆ. ಬೆಂಗಳೂರಿನ ಮಾರತಹಳ್ಳಿಯಲ್ಲಿ ನಡೆದುಕೊಂಡು ಹೋಗುತ್ತಾ ವಿಡಿಯೊ ಮಾಡಿರುವ ಆಕೆ, ಸ್ನೇಹಿತರೇ ಮಾರತಹಳ್ಳಿಯ


ಊಟ, ತಿಂಡಿ ಸ್ಕಿಪ್ ಮಾಡೋದ್ರಿಂದ ಮತ್ತೂ ದಪ್ಪ ಆಗ್ತಿರಾ; ಹುಷಾರು! ಇಲ್ಲಿದೆ ಕಾರಣ
ಆಧುನಿಕ ಜೀವನ ಶೈಲಿಯ ಅತಿ ದೊಡ್ಡ ಸಮಸ್ಯೆ ಎಂದರೆ ಬೊಜ್ಜು. ಭಾರತದಲ್ಲಿ ನಾಲ್ಕು ಮಂದಿಯಲ್ಲಿ ಒಬ್ಬರು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಹೀಗೆಯೇ ಮುಂದುವರಿದರೆ ಇನ್ನು ಮೂರು ದಶಕಗಳಲ್ಲಿ ಅರ್ಧ ಭಾರತ ದಡೂತಿಗಳ ದೇಶವಾಗಲಿದೆ ಎನ್ನುತ್ತದೆ ವೆಲ್ನೆಸ್ ಕ್ಷೇತ್ರದ ಅಂಕಿ ಅಂಶಗಳು. ಹಾಗಾದರೆ ನಾವು ಭಾರತೀಯರು ಹೀಗೆ ದಿನದಿಂದ ದಿನಕ್ಕೆ ದಪ್ಪಗಾಗುತ್ತಿರುವುದಕ್ಕೆ ಕಾರಣವೇನು? ಯಾವ ಸಂಗತಿಗಳು ನಮ್ಮನ್ನು ಈಪಾಟಿ ದಡೂತಿಗಳನ್ನಾಗಿ ಮಾಡುತ್ತಿದೆ? ಇದಕ್ಕೆ ಪರಿಹಾರವೇನು? ಯಾವ ರೀತಿಯ ಡಯಟಿಂಗ್ ಮಾಡಿದರೆ ನಾವು ತೆಳ್ಳಗಾಗಬಹುದು? ಇಂದಿನ ಮಧ್ಯವಯಸ್ಕ ಜನಾಂಗದ ಮುಂದಿರುವ ಮಿಲಿಯನ್ ಡಾಲರ್ ಪ್ರಶ್ನ


10 ಗ್ರಾಂ ಚಿನ್ನಕ್ಕೆ ₹1.50 ಲಕ್ಷ: ₹3 ಲಕ್ಷ ದಾಟಿದ ಬೆಳ್ಳಿದರ
ಬೆಂಗಳೂರು: ಬೆಂಗಳೂರಿನ ಮಾರುಕಟ್ಟೆಯಲ್ಲಿ ಸೋಮವಾರ ನಡೆದ ವಹಿವಾಟಿನಲ್ಲಿ ಕೆ.ಜಿ ಬೆಳ್ಳಿ ಧಾರಣೆಯು ₹3 ಲಕ್ಷ ದಾಟಿದೆ. 24 ಕ್ಯಾರಟ್ ಪರಿಶುದ್ಧ ಚಿನ್ನದ ಬೆಲೆ 10 ಗ್ರಾಂ ಗೆ ₹1.50 ಲಕ್ಷಕ್ಕೆ ತಲುಪಿದೆ. ಇದು ಚಿನ್ನ ಹಾಗೂ ಬೆಳ್ಳಿಯ ಈವರೆಗಿನ ದಾಖಲೆಯ ಬೆಲೆಯಾಗಿದೆ. 2024ರ ಜನವರಿ 19ರಂದು ಬೆಂಗಳೂರಿನಲ್ಲಿ ಕೆ.ಜಿ ಬೆಳ್ಳಿ ಬೆಲೆ ₹73 ಸಾವಿರ ಆಗಿತ್ತು. 2025ರ ಜನವರಿ 20ಕ್ಕೆ ₹96,200ಕ್ಕೆ ತಲುಪಿತು. ಈಗ (2026ರ ಜನವರಿ 19) ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆಯು ₹3,07,900ಕ್ಕೆ ಜಿಗಿದಿ ಮುಂದಿನ ದಿನಗಳಲ್ಲಿ ಬೆಳ್ಳಿ ಬೆಲೆಯು ಕೆ.ಜಿ.ಗೆ ₹3.5 ಲಕ್ಷಕ್ಕೂ ಏರಿಕೆ ಆಗಬಹುದು ಎಂದು ಬೆಂಗಳೂರು ಜ್ಯ


ಭೀಮಣ್ಣ ಖಂಡ್ರೆ: ಹೋರಾಟದ ಕೆಚ್ಚು, ಸ್ವಾಭಿಮಾನದ ಕಿಚ್ಚು...
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷರೂ ಆದ ಮಾಜಿಸಚಿವ ಭೀಮಣ್ಣ ಖಂಡ್ರೆಯವರ ಇಡೀ ವ್ಯಕ್ತಿತ್ವವನ್ನು ವರ್ಣಿಸಲು ಈ ಮೇಲಿನ ಸಾಲು ಸಾಕು. ಸಮಾಜವಾದಿ ವಿಚಾರಧಾರೆಯ ಜಯಪ್ರಕಾಶ ನಾರಾಯಣ, ರಾಮ ಮನೋಹರ್ ಲೋಹಿಯಾ, ಅಶೋಕ್ ಮೆಹ್ರಾ ಅವರಿಂದ ಸಾಕಷ್ಟು ಪ್ರಭಾವಿತರಾಗಿದ್ದ ಖಂಡ್ರೆಯವರು ಅದನ್ನೇ ಮೈಗೂಡಿಸಿಕೊಂಡಿದ್ದರು. ಜೀವನದುದ್ದಕ್ಕೂ ಅದರಂತೆ ಬದುಕಿ ತೋರಿಸಿದರು. ಇದನ್ನೂ ಓದಿ: ಬೀದರ್: ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ ಯೌವನಾವಸ್ಥೆಯಲ್ಲಿ ಸ್ವಾತಂತ್ರ್ಯ ಸಂಗ್ರಾಮದಿಂದ ಪ್ರೇರಣೆಗೊಂಡಿದ್ದ ಅವರು, ಅಂದಿನ ಹೈದರಾಬಾದ್ ಕರ್ನಾಟಕದ ರಜಾಕಾರರ ದೌರ್ಜನ್ಯದ ವಿರುದ್ಧ ಸೆಟೆದು ನಿಂತು, ಹೋರ


ಜಿಬಿಎ ವ್ಯಾಪ್ತಿಯ ಐದು ಪಾಲಿಕೆ ಚುನಾವಣೆ: ಜೆಡಿಎಸ್-ಬಿಜೆಪಿ ಮೈತ್ರಿ
ಬೆಂಗಳೂರು: ಲೋಕಸಭೆ ಚುನಾವಣೆಯನ್ನು ಬಿಜೆಪಿ ಜತೆಗೂಡಿ ಎದುರಿಸಿದ್ದ ಜೆಡಿಎಸ್, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಾಲಿಕೆಗಳ ಚುನಾವಣೆಯಲ್ಲೂ ಮೈತ್ರಿಗೆ ಮುಂದಾಗಿದೆ. 'ಚುನಾವಣೆಯನ್ನು ಬಿಜೆಪಿ ಜತೆಗೆ ಮೈತ್ರಿಯೊಂದಿಗೇ ಎದುರಿಸೋಣ. ಮೈತ್ರಿಗೆ ಧಕ್ಕೆಯಾಗುವ ರೀತಿಯಲ್ಲಿ ಯಾರೂ ನಡೆದುಕೊಳ್ಳಬಾರದು ' ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಸೂಚಿಸಿದ್ದಾರೆ. ಬೃಹತ್ ಮುಂಬೈ ನಗರ ಪಾಲಿಕೆಗೆ (ಬಿಎಂಸಿ) ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನಾ ಮೈತ್ರಿಕೂಟವು ಸರಳ ಬಹುಮತ ಪಡೆದ ಬೆನ


Bengaluru: ನಗರದಲ್ಲಿ 4 ವರ್ಷಗಳಲ್ಲಿ 9,450 ಮಂದಿ ಆತ್ಮಹತ್ಯೆ
ಬೆಂಗಳೂರು: ಕೌಟುಂಬಿಕ ಕಲಹ, ಆರ್ಥಿಕ ಸಂಕಷ್ಟ, ನಿರುದ್ಯೋಗ ಸೇರಿ ವಿವಿಧ ಕಾರಣಗಳಿಗೆ ನಗರದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ 9,450 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿ ದಿನ ಸರಾಸರಿ ಆರರಿಂದ ಏಳು ಜನರು ಆತ್ಮಹತ್ಯೆಯ ಮೂಲಕ ಕೊನೆಯುಸಿರೆಳೆಯುತ್ತಿದ್ದಾರೆ. ಮಾನಸಿಕ ಅನಾರೋಗ್ಯ ಸಮಸ್ಯೆಗಳು ಆತ್ಮಹತ್ಯೆಯಂತಹ ನಿರ್ಧಾರಕ್ಕೆ ಕಾರಣವಾಗುತ್ತಿವೆ. ಗೃಹ ಇಲಾಖೆಯ ಮಾಹಿತಿ ಪ್ರಕಾರ, ನಗರದಲ್ಲಿ ಪ್ರತಿ ವರ್ಷ ಎರಡು ಸಾವಿರಕ್ಕೂ ಅಧಿಕ ಮಂದಿ ಆತ್ಮಹತ್ಯೆಯಿಂದ ಮೃತಪಡುತ್ತಿದ್ದಾರೆ. ಕಟ್ಟಡದಿಂದ ಜಿಗಿದು, ನೇಣು ಬಿಗಿದುಕೊಂಡು, ವಿಷ ಸೇವಿಸಿ, ರೈಲ್ವೆ ಹಳಿಗೆ ಹಾರಿ, ಗುಂಡು ಹಾರಿಸಿಕೊಂಡು ಸೇರಿ ವಿವಿ


ಸ್ವಾದಭರಿತ ಹಾಲಿಗೆ ಶೇ 12ರಷ್ಟು ಜಿಎಸ್ಟಿ ಅಲ್ಲ, ಶೇ5 ವಿಧಿಸಿ: ಹೈಕೋರ್ಟ್
ಬೆಂಗಳೂರು: 'ಸ್ವಾದಭರಿತ ಹಾಲನ್ನು ಡೇರಿ ಉತ್ಪನ್ನವೆಂದು ಪರಿಗಣಿಸಬೇಕೇ ಹೊರತು ಪಾನೀಯ ಎಂದು ವರ್ಗೀಕರಿಸುವಂತಿಲ್ಲ. ಹಾಗಾಗಿ, ಅದಕ್ಕೆ ಶೇ 12ರಷ್ಟು ಜಿಎಸ್ಟಿ ವಿಧಿಸುವ ಬದಲು ಶೇ 5ರಷ್ಟು ಮಾತ್ರ ವಿಧಿಸಬೇಕು' ಎಂದು ಹೈಕೋರ್ಟ್ ಆದೇಶಿಸಿದೆ. ಈ ಸಂಬಂಧ 'ದೋಡ್ಲಾ' ಡೇರಿ ಲಿಮಿಟೆಡ್ ಕಂಪನಿ ಸಲ್ಲಿಸಿದ್ದ ರಿಟ್ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರ ದೋಡ್ಡಾ ಕಂಪನಿ ಪಾವತಿ ಮಾಡಿರುವ ತೆರಿಗೆ ಹಣವನ್ನು ಮರು ಪಾವತಿಸುವಂತೆ ನಿರ್ದೇಶಿಸಿದೆ. 'ಸುವಾಸನೆಭರಿತ ಹಾಲನ್ನು ಹೊಂದಿರುವ ಪಾನೀಯಗಳು ಉದ್ದೇಶಿತ ಜಿಎಸ್ಟಿ ಸುಂಕದ ಶೀರ್ಷಿಕೆಯ


ಬಳ್ಳಾರಿ ಗಲಭೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ 26 ಆರೋಪಿಗಳು
ಬೆಂಗಳೂರು: ಬಳ್ಳಾರಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದ ಬಂಧಿತ 26 ಆರೋಪಿಗಳು ಸೋಮವಾರ ಮಧ್ಯಾಹ್ನದ ವೇಳೆಗೆ ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದರು.ಬಂಧಿತರನ್ನು ಬಿಗಿ ಭದ್ರತೆಯಲ್ಲಿ ಬಳ್ಳಾರಿಯಿಂದ ಕರೆತಂದು ಎಲ್ಲ ಆರೋಪಿಗಳನ್ನು, 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರ ಮುಂದೆ ಹಾಜರು ಪಡಿಸಲಾಯಿತು. ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಕೀಲರು, 'ಆರೋಪಿಗಳಿಗೆ ಜಾಮೀನು ಮಂಜೂರು ಮಾಡಬಾರದು' ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಾಧೀಶರು, ಜಾಮೀನು ಅರ್ಜಿಗ


ಆಳ-ಅಗಲ; ಮಾದಕ ಪದಾರ್ಥ ಸಾಗಾಟ, ಮಾರಾಟ, ಬಳಕೆ ಅವ್ಯಾಹತ
ದೇಶದ ಈಶಾನ್ಯ ರಾಜ್ಯಗಳು ಮತ್ತು ಉತ್ತರದ ಕೆಲವು ರಾಜ್ಯಗಳಂತೆ ಕರ್ನಾಟಕದಲ್ಲಿಯೂ ಮಾದಕ ವಸ್ತುಗಳ ಬಳಕೆ, ಸಂಗ್ರಹ ಮತ್ತು ಕಳ್ಳಸಾಗಣೆ ವ್ಯಾಪಕವಾಗಿದೆ. ರಾಜ್ಯದಲ್ಲಿ ಮಾದಕ ದ್ರವ್ಯಗಳ ತಯಾರಿಕೆ, ಕೃಷಿ, ಸಂಗ್ರಹ, ಮಾರಾಟ, ವ್ಯಾಪಾರ, ಸಾಗಣೆ, ರಫ್ತು, ಆಮದು ಮತ್ತು ಬಳಕೆ ಸಂಬಂಧದ 'ಮಾದಕ ವಸ್ತುಗಳು ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ' (ಎನ್ಡಿಪಿಎಸ್) ಅಡಿ ದಾಖಲಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇವುಗಳಲ್ಲಿ ಡ್ರಗ್ಸ್ ಸೇವನೆ ಮತ್ತು ಸಂಗ್ರಹಕ್ಕೆ ಸಂಬಂಧಿಸಿದ ಪ್ರಕರಣಗಳೇ ಅಧಿಕವಾಗಿವೆ. ಮಾದಕ ವಸ್ತುಗಳ ಬಳಕೆಯು ಯುವಕ, ಯುವತಿಯರಲ್ಲಿ ಹೆಚ್ಚಾಗುತ್ತಿದೆ. 'ಡ್ರಿಲ್'ನ ಬಯಕೆ, ಮೋಜು


ಬಳ್ಳಾರಿ ಗಲಭೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ 26 ಆರೋಪಿಗಳು
ಬೆಂಗಳೂರು: ಬಳ್ಳಾರಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದ ಬಂಧಿತ 26 ಆರೋಪಿಗಳು ಸೋಮವಾರ ಮಧ್ಯಾಹ್ನದ ವೇಳೆಗೆ ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದರು. ಬಂಧಿತರನ್ನು ಬಿಗಿ ಭದ್ರತೆಯಲ್ಲಿ ಬಳ್ಳಾರಿಯಿಂದ ಕರೆತಂದು ಎಲ್ಲ ಆರೋಪಿಗಳನ್ನು, 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರ ಮುಂದೆ ಹಾಜರು ಪಡಿಸಲಾಯಿತು. ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಕೀಲರು, 'ಆರೋಪಿಗಳಿಗೆ ಜಾಮೀನು ಮಂಜೂರು ಮಾಡಬಾರದು' ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು.ಇದನ್ನು ಪರಿಗಣಿಸಿದ ನ್ಯಾಯಾಧೀಶರು, ಜಾಮೀನು ಅರ್ಜಿ






