top of page
ವಿದೇಶ


ಖಮೇನಿಗೆ ಅಂತಿಮ ವಿದಾಯ: ಬಿಕ್ಕಿಬಿಕ್ಕಿ ಅತ್ತ ಇರಾನ್ ಸ್ಪೀಕರ್, ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ! Video
ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಯುದ್ಧ ಆರಂಭಿಸಿದ ಮೊದಲ ದಿನವಾದ ಫೆಬ್ರವರಿ 28 ರಂದು ನಡೆದ ದಾಳಿಯಲ್ಲಿ ಅಲಿ ಖಮೇನಿ ಅವರ ಹತ್ಯೆಯಾಗಿತ್ತು. ಟೆಹ್ರಾನ್: ಇರಾನ್ ನ ಪರಮೋಚ್ಛ ನಾಯಕರಾಗಿದ್ದ ಆಯತೊಲ್ಲಾ ಅಲಿ ಖಮೇನಿ ಅವರ ಅಂತಿಮ ವಿದಾಯ ಸಮಾರಂಭದಲ್ಲಿ ಭಾಗವಹಿಸಿದ್ದ ಇರಾನ್ ನ ಸಂಸತ್ ಸ್ಪೀಕರ್ ಮೊಹಮ್ಮದ್ ಬಾಖಿರ್ ಖಾಲೀಬಾಫ್, ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ, ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಮತ್ತಿತರ ಧಾರ್ಮಿಕ ಮುಖಂಡರು ಕಣ್ಣೀರಿಟಿದ್ದಾರೆ. ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಯುದ್ಧ ಆರಂಭಿಸಿದ ಮೊದಲ ದಿನವಾದ ಫೆಬ್ರವರಿ 28 ರಂದು ನಡೆದ ದಾಳಿಯಲ್


ರಷ್ಯಾದಿಂದಲೇ ತೈಲ ತಂದು, ರಷ್ಯಾಕ್ಕೇ ಪೆಟ್ರೋಲ್ ಮಾರಾಟ...? ಏನಿದು ಭಾರತದ ರಿಫೈನರಿಗಳ ‘ಉಲ್ಟಾ’ ಗೇಮ್? ಕೇಂದ್ರ ಸರ್ಕಾರ ಹೇಳಿದ್ದೇನು..?
ಸುಮಾರು 60,000 ಮೆಟ್ರಿಕ್ ಟನ್ ಪೆಟ್ರೋಲ್ ಈಗಾಗಲೇ ರವಾನೆಯಾಗಿದ್ದು, ಇನ್ನೂ ಎರಡು ಟ್ಯಾಂಕರ್ಗಳಲ್ಲಿ ತಲಾ 30,000–40,000 ಟನ್ ಪೆಟ್ರೋಲ್ ಕಳುಹಿಸಲಾಗಿದೆ ಎಂಬ ಮಾಹಿತಿಯೂ ವರದಿಯಾಗಿತ್ತು. ನವದೆಹಲಿ: ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವ ಭಾರತ, ಅದನ್ನೇ ಸಂಸ್ಕರಿಸಿ ಮತ್ತೆ ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿದೆ ಎಂಬ ವರದಿಗಳು ಇತ್ತೀಚೆಗೆ ಚರ್ಚೆಗೆ ಗ್ರಾಸವಾಗಿವೆ. ಈ ಬೆಳವಣಿಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, "ರಷ್ಯಾದಿಂದ ತೈಲ ತಂದು ಮತ್ತೆ ರಷ್ಯಾಕ್ಕೇ ಪೆಟ್ರೋಲ್ ಮಾರಾಟ ಮಾಡಲಾಗುತ್ತಿದೆಯೇ?" ಎಂಬ ಕುತೂಹಲ ಮೂಡಿಸಿದೆ. ಆದರೆ ಈ ಬಗ್ಗೆ ಕೇಂ


ಅಮೆರಿಕವೇ ಹೆಚ್ಚು ಖರ್ಚು ಮಾಡುತ್ತಿದ್ದರೂ ಕಷ್ಟದ ಸಮಯದಲ್ಲಿ ಕೈಕೊಟ್ಟರು: ಏಕಪಕ್ಷೀಯ ಸಂಬಂಧ ಮುಂದುವರಿಸುವುದು ಹಾಸ್ಯಾಸ್ಪದ: NATO ವಿರುದ್ಧ ಟ್ರಂಪ್ ಆಕ್ರೋಶ
ಸಂಕಷ್ಟದ ಸಮಯದಲ್ಲಿ ಮಿತ್ರ ರಾಷ್ಟ್ರಗಳು ಅಮೆರಿಕದ ಬೆಂಬಲಕ್ಕೆ ಬರಲಿಲ್ಲ. ಇದೇ ಕಾರಣಕ್ಕೆ ಅಮೆರಿಕ ಮಾತ್ರ ನ್ಯಾಟೋ ರಕ್ಷಣೆಯ ಭಾರವನ್ನು ಹೊರುವುದು ಸರಿಯಲ್ಲ. ವಾಷಿಂಗ್ಟನ್: ನ್ಯಾಟೋ (NATO)ಗೆ ಅಮೆರಿಕ ನೀಡುತ್ತಿರುವ ಪ್ರಸ್ತುತ ಬೆಂಬಲ "ಏಕಪಕ್ಷೀಯ"ವಾಗಿದ್ದು, ಅದೇ ರೀತಿಯ ಸಂಬಂಧವನ್ನು ಮುಂದುವರಿಸುವುದು "ಹಾಸ್ಯಾಸ್ಪದ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜುಲೈ 7 ಮತ್ತು 8ರಂದು ನಡೆಯಲಿರುವ ನ್ಯಾಟೋ ಶೃಂಗಸಭೆಗೆ ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಟ್ರಂಪ್ ಅವರ ಈ ಹೇಳಿಕೆ ಜಾಗತಿಕ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ತಮ್ಮ ಸಾಮಾಜಿಕ


ಶ'ಪನಾಮ ಕಾಲುವೆ ಬಿಟ್ಟುಕೊಟ್ಟಿದ್ದು ದೊಡ್ಡ ಮೂರ್ಖತನದ ನಿರ್ಧಾರ': ಚೀನಾ ಕಬಳಿಸಲು ಯತ್ನಿಸುತ್ತಿದೆ; ಟ್ರಂಪ್
ಅಮೆರಿಕವು ಪನಾಮ ಕಾಲುವೆಯ ಮೇಲಿನ ಹಕ್ಕನ್ನು ಬಿಟ್ಟುಕೊಟ್ಟ ತಕ್ಷಣವೇ, ಪನಾಮ ಸರ್ಕಾರವು ಹಡಗುಗಳ ಸಂಚಾರ ಶುಲ್ಕವನ್ನು ನಾಲ್ಕು ಪಟ್ಟು ಹೆಚ್ಚಿಸಿತು. ಇದರಿಂದಾಗಿ ಯಾವುದೇ ಟ್ರಾಫಿಕ್ ಕಳೆದುಕೊಳ್ಳದೆ ಪನಾಮಾ ದೇಶವು ಭಾರೀ ಪ್ರಮಾಣದ ಹಣವನ್ನು ಗಳಿಸಿತು. ಅಮೆರಿಕ ದೊಡ್ಡ ಆದಾಯವನ್ನು ಕಳೆದುಕೊಂಡಿತು. ಪನಾಮ ಕಾಲುವೆಯ (Panama Canal) ಮೇಲಿನ ನಿಯಂತ್ರಣವನ್ನು ಪನಾಮಗೆ ಹಸ್ತಾಂತರಿಸಿದ ಅಮೆರಿಕದ ಹಿಂದಿನ ನಿರ್ಧಾರವನ್ನು "ದೊಡ್ಡ ಮೂರ್ಖತನ" ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಟೀಕಿಸಿದ್ದಾರೆ. ಅಲ್ಲದೆ, ಈ ಮಹತ್ವದ ಜಲಮಾರ್ಗದ ಮೇಲೆ ಚೀನಾ ತನ್ನ ಪ್ರಭಾವವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದ


ಜನ್ಮಸಿದ್ಧ ಪೌರತ್ವ ರದ್ದತಿ ಆದೇಶಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಟ್ರಂಪ್ಗೆ ಭಾರೀ ಶಾಕ್, 'ದೇಶಕ್ಕೆ ಮಾರಕ' ಎಂದ ಅಮೆರಿಕ ಅಧ್ಯಕ್ಷ..!
ಇದು ನಮ್ಮ ದೇಶಕ್ಕೆ ಅತ್ಯಂತ ಕೆಟ್ಟ ನಿರ್ಧಾರ" ಎಂದು ಕರೆದಿದ್ದಾರೆ. ಅಷ್ಟೇ ಅಲ್ಲದೆ, ಈ ಸಮಸ್ಯೆಯನ್ನು ಬಗೆಹರಿಸಲು ಯಾವುದೇ ದೀರ್ಘ ಮತ್ತು ಸಂಕೀರ್ಣವಾದ ಸಂವಿಧಾನ ತಿದ್ದುಪಡಿಯ ಅಗತ್ಯವಿಲ್ಲ. ವಾಷಿಂಗ್ಟನ್: ಅಮೆರಿಕಾದಲ್ಲಿ ಜನಿಸುವ ವಿದೇಶಿ ಮೂಲದ ಮಕ್ಕಳಿಗೆ ಸಿಗುವ ಜನ್ಮಸಿದ್ಧ ಪೌರತ್ವವನ್ನು (Birthright Citizenship) ರದ್ದುಗೊಳಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಹತ್ವಾಕಾಂಕ್ಷೆಯ ಕಾರ್ಯಕಾರಿ ಆದೇಶಕ್ಕೆ ಅಮೆರಿಕಾ ಸುಪ್ರೀಂ ಕೋರ್ಟ್ ಭಾರಿ ಶಾಕ್ ನೀಡಿದೆ. ಟ್ರಂಪ್ ಅವರ ಆದೇಶವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಈ ಐತಿಹಾಸಿಕ ತೀರ್ಪು "ನಮ್ಮ ದೇಶಕ್ಕೆ ತುಂಬಾ ಕೆಟ್ಟದ


ಯುದ್ಧದಲ್ಲೂ ಮಕ್ಕಳ ರಕ್ಷಣೆ ಅಗತ್ಯ, ಶಾಲೆಗಳ ಗುರಿಯಾಗಿಸುವವರ ವಿರುದ್ಧ ಇಡೀ ವಿಶ್ವ ಒಗ್ಗೂಡಲಿ: ವಿಶ್ವಸಂಸ್ಥೆಯಲ್ಲಿ ಭಾರತದ ಆಗ್ರಹ..!
ಶಿಕ್ಷಣವು ಶಾಶ್ವತ ಶಾಂತಿ ನಿರ್ಮಾಣದ ಪ್ರಮುಖ ಅಡಿಪಾಯವಾಗಿದ್ದು, ಮಕ್ಕಳಿಗೆ ಕಲಿಯುವ, ಬೆಳೆಯುವ ಮತ್ತು ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಸಾಧಿಸುವ ಅವಕಾಶವನ್ನು ಯಾವುದೇ ಸಂದರ್ಭದಲ್ಲೂ ಕಸಿದುಕೊಳ್ಳಬಾರದು. ನ್ಯೂಯಾರ್ಕ್: ಸಶಸ್ತ್ರ ಸಂಘರ್ಷಗಳಿಂದ ಬಾಧಿತವಾಗಿರುವ ಪ್ರದೇಶಗಳಲ್ಲಿ ಶಾಲೆಗಳು ಮತ್ತು ಮಕ್ಕಳನ್ನು ಗುರಿಯಾಗಿಸಿ ನಡೆಯುತ್ತಿರುವ ದಾಳಿಗಳಿಗೆ ಅಂತ್ಯ ಹಾಡಲು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಒತ್ತಾಯಿಸಿದೆ. ಮಕ್ಕಳ ರಕ್ಷಣೆ ಬಗ್ಗೆ ಮಾತನಾಡುವುದಷ್ಟೇ ಸಾಕಾಗುವುದಿಲ್ಲ, ಅವರ ಮೇಲೆ ದಾಳಿ ನಡೆಸುವವರನ್ನು ಹೊಣೆಗಾರರನ್ನಾಗಿ


ಸ್ವಿಟ್ಜರ್ಲೆಂಡ್ನಲ್ಲಿ ಮಹಾ ಸಂಧಾನ: US-Iran ಹಸ್ತಲಾಘವ, ಹಿಜ್ಬುಲ್ಲಾ–ಇಸ್ರೇಲ್ ಸಂಘರ್ಷ ತಡೆಯಲು ಹೊಸ ಸಮನ್ವಯ ವ್ಯವಸ್ಥೆ ಜಾರಿಗೆ ಸಮ್ಮತಿ..!
ಪಾಕಿಸ್ತಾನ ಮತ್ತು ಕತಾರ್ ಮಧ್ಯಸ್ಥಿಕೆಯಲ್ಲಿ ನಡೆದ ಈ ಮಾತುಕತೆಯ ಮೊದಲ ಸುತ್ತು ಸೋಮವಾರ ಮುಕ್ತಾಯಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ತಾಂತ್ರಿಕ ಮಟ್ಟದ ಚರ್ಚೆಗಳು ಮುಂದುವರಿಯಲಿವೆ. ಮಧ್ಯಪ್ರಾಚ್ಯದಲ್ಲಿ ತಿಂಗಳುಗಳ ಕಾಲ ಮುಂದುವರಿದ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸ್ವಿಟ್ಜರ್ಲ್ಯಾಂಡ್ನಲ್ಲಿ ನಡೆದ ಅಮೆರಿಕ–ಇರಾನ್ ಉನ್ನತ ಮಟ್ಟದ ಮಾತುಕತೆಗಳಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ. ಲೆಬನಾನ್ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ನಿಯಂತ್ರಿಸಲು ಮತ್ತು ಕದನ ವಿರಾಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ವಿಶೇಷ 'ಡಿ-ಕಾನ್ಫ್ಲಿಕ್ಶನ್ ಸೆಲ್' (De-conflictio


ಸಿಂಧೂ ನದಿ ನೀರು ತಡೆದರೆ ಸುಮ್ಮನಿರಲ್ಲ, ಯುದ್ಧ ಖಚಿತ: ಭಾರತದ ವಿರುದ್ಧ ಮತ್ತೆ ಉದ್ಧಟತನ ತೋರಿದ ಪಾಕಿಸ್ತಾನ..!
ನಮ್ಮ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎದುರಾದರೆ, ಅದರಲ್ಲೂ ನೀರು ನಮ್ಮ ಭದ್ರತೆಯ ಭಾಗವಾಗಿರುವುದರಿಂದ, ಭಾರತ ವಿರುದ್ಧ ಯುದ್ಧಕ್ಕೂ ಹೋಗುತ್ತೇವೆ. ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದದ ವಿವಾದದ ನಡುವೆ ಭಾರತಕ್ಕೆ ಪಾಕಿಸ್ತಾನ ಮತ್ತೊಮ್ಮೆ ಯುದ್ಧದ ಬೆದರಿಕೆ ಹಾಕಿದೆ. ನೀರು ನಮ್ಮ ರಾಷ್ಟ್ರೀಯ ಭದ್ರತೆಯ ಭಾಗವಾಗಿದ್ದು, ಅದರ ಮೇಲೆ ಯಾವುದೇ ರೀತಿಯ ಅಪಾಯ ಎದುರಾದರೆ ಭಾರತ ವಿರುದ್ಧ ಯುದ್ಧಕ್ಕೂ ಹಿಂಜರಿಯುವುದಿಲ್ಲ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಉದ್ಧಟತನ ಪ್ರದರ್ಶಿಸಿದ್ದಾರೆ. ಪಾಕಿಸ್ತಾನದ ಎಆರ್ವೈ ನ್ಯೂಸ್ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಆಸಿಫ್, ನೀರು ಪಾಕಿ


ಆಕೆ 'ಅತ್ಯಂತ ಕೆಟ್ಟದಾಗಿ ನನ್ನೊಂದಿಗೆ ಫೋಟೋ ತೆಗೆಸಿಕೊಳ್ಳಲು ಬಯಸಿದ್ದರು: Trump ವಿವಾದಾತ್ಮಕ ಹೇಳಿಕೆ, ಮೆಲೋನಿ ಛೀಮಾರಿ! Video
ಇತ್ತೀಚೆಗೆ ಫ್ರಾನ್ಸ್ನಲ್ಲಿ ನಡೆದ G7 ಶೃಂಗಸಭೆಯ ಸಂದರ್ಭದಲ್ಲಿ ನನ್ನೊಂದಿಗೆ ಫೋಟೋ ತೆಗೆಸಿಕೊಳ್ಳಲು ಮೆಲೋನಿ ಬೇಡಿಕೊಂಡರು ಎಂದು ಟ್ರಂಪ್, ಇಟಲಿಯ ಟಿವಿ ಚಾನೆಲ್ La7 ಗೆ ಹೇಳಿಕೆ ನೀಡಿದ ನಂತರ ಈ ವಿವಾದ ಭುಗಿಲೆದ್ದಿದೆ ವಾಷಿಂಗ್ಟನ್: ಅಮೆರಿಕ ಮತ್ತು ಇಟಲಿ ನಡುವೆ ಹೊಸ ಗಲಾಟೆ ಶುರುವಾಗಿದೆ. G7 ಶೃಂಗಸಭೆಯ ಫೋಟೋ-ಅಪ್ (photo-op) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ವಿವಾದವಾಗಿ ಮಾರ್ಪಟ್ಟಿದೆ. ಇತ್ತೀಚೆಗೆ ಫ್ರಾನ್ಸ್ನಲ್ಲಿ ನಡೆದ G7 ಶೃಂಗಸಭೆಯ ಸಂದರ್ಭದಲ್ಲಿ ನನ್ನೊಂದಿಗೆ ಫೋಟೋ ತೆಗೆಸಿಕೊಳ್ಳಲು ಮೆಲೋನಿ ಬೇಡಿಕೊಂಡರು ಎಂದು ಟ್ರಂಪ್,


ಇದು ಅಂತಿಮ ಒಪ್ಪಂದವಲ್ಲ, ದುರ್ವರ್ತನೆ ತೋರಿದರೆ ಯುದ್ಧ ಪುನರಾರಂಭ: ಇರಾನ್ಗೆ ಟ್ರಂಪ್ ಖಡಕ್ ಎಚ್ಚರಿಕೆ
ಇರಾನ್ ಒಪ್ಪಂದದ ಷರತ್ತುಗಳನ್ನು ಪಾಲಿಸದಿದ್ದರೆ ಅಥವಾ ನಮ್ಮ ನಿರೀಕ್ಷೆಯಂತೆ ನಡೆದುಕೊಳ್ಳದಿದ್ದರೆ ಮತ್ತೆ ಬಾಂಬ್ ದಾಳಿ ಆರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಫ್ರಾನ್ಸ್: ಅಮೆರಿಕಾ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದ ಜಾರಿಗೆ ಬಂದ ಬೆನ್ನಲ್ಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇದು ಒಪ್ಪಂದವು ಅಂತಿಮವಲ್ಲ ಇರಾನ್ ದುರ್ವರ್ತನೆ ಯುದ್ಧ ಪುನರಾರಂಭವಾಗಲಿದೆ ಎಂದು ಹೇಳಿದ್ದಾರೆ. ಫ್ರಾನ್ಸ್ನ ಎವಿಯನ್-ಲೆ-ಬೇನ್ಸ್ನಲ್ಲಿ ನಡೆದ ಜಿ7 ಶೃಂಗಸಭೆಯ ವೇಳೆ ಮಾತನಾಡಿದ ಟ್ರಂಪ್, ಇರಾನ್ನೊಂದಿಗೆ ಮಾಡಿಕೊಂಡಿರುವ ಒಪ್ಪಂದವು ಮಧ್ಯಂತರ ಒಪ್ಪಂದವೇ ಹೊ


ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: ಇರಾನ್ ಕ್ಷಿಪಣಿ ದಾಳಿ, ಗಾಜಾ ಗಡಿದ್ವಾರ ಬಂದ್; ‘ಪ್ರತಿದಾಳಿ ಬೇಡ’- ನೆತನ್ಯಾಹುಗೆ ಟ್ರಂಪ್ ಖಡಕ್ ಸಂದೇಶ
ಕ್ಷಿಪಣಿ ದಾಳಿಯ ನಂತರ ಗಾಜಾ ಪಟ್ಟಿಗೆ ಮಾನವೀಯ ನೆರವು ಮತ್ತು ಅಗತ್ಯ ವಸ್ತುಗಳ ಸಾಗಣೆಗೆ ಬಳಸಲಾಗುತ್ತಿದ್ದ ರಫಾ ಹಾಗೂ ಕೆರೆಮ್ ಶಾಲೋಮ್ ಗಡಿದ್ವಾರಗಳನ್ನು ಇಸ್ರೇಲ್ ತಾತ್ಕಾಲಿಕವಾಗಿ ಬಂದ್ ಮಾಡಿದೆ. ಭದ್ರತಾ ಪರಿಸ್ಥಿತಿ ಸುಧಾರಿಸುವವರೆಗೆ ಈ ಕ್ರಮ ಮುಂದುವರಿಯಲಿದೆ. ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ ಕವಿದಿದ್ದು, ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ಹೊಸ ಹಂತಕ್ಕೆ ತಲುಪಿದೆ. ಯುದ್ಧ ವಿರಾಮ ಜಾರಿಯಾದ ಹಲವು ವಾರಗಳ ಬಳಿಕ ಇರಾನ್ ಭಾನುವಾರ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಈ ಬೆಳವಣಿಗೆ ಪ್ರದೇಶದಲ್ಲಿ ಮತ್ತೆ ಭದ್ರತಾ ಆತಂಕವನ್ನು ಹೆಚ್ಚಿಸಿದೆ. ದಾಳಿಯ ಬೆನ್ನಲ


Blue-Collar Blackout: ಇನ್ನೈದು ವರ್ಷಗಳಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್ ಗಳೇ ಸಿಗಲ್ಲ.. ತಜ್ಞರ ಎಚ್ಚರಿಕೆ
ಕೆನಡಾ ಮೂಲದ ಮ್ಯಾಕ್ರೋ ಟ್ರೆಂಡ್ಸ್ ಸಂಶೋಧನಾ ಸಂಸ್ಥೆ ಪೈನ್ಟ್ರೀ ಸಂಸ್ಥಾಪಕ ರಿತೇಶ್ ಜೈನ್ ಈ ಎಚ್ಚರಿಕೆ ನೀಡಿದ್ದು, ಭಾರತದಲ್ಲಿ ಎಂಜಿನಿಯರ್ಗಳಿಗಿಂತ ಮೊದಲು ಪ್ಲಂಬರ್ಗಳ ಕೊರತೆ ಉಂಟಾಗಬಹುದು ಎಂದು ಹೇಳಿದ್ದಾರೆ. ನವದೆಹಲಿ: ಆಘಾತಕಾರಿ ಬೆಳವಣಿಗೆಯಲ್ಲಿ ದೇಶದಲ್ಲಿ ಕೇವಲ ಇನ್ನೈದು ವರ್ಷಗಳಲ್ಲಿ Blue-Collar ಕಾರ್ಮಿಕರ ಗಂಭೀರ ಕೊರತೆ ಎದುರಾಗಲಿದ್ದು, ಪ್ಲಂಬರ್ಗಳು, ಎಲೆಕ್ಟ್ರಿಷಿಯನ್ ಗಳಂತಹ ಬ್ಲೂಕಾಲರ್ ಉದ್ಯೋಗಿಗಳ ಕೊರತೆ ಎದುರಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಕೆನಡಾ ಮೂಲದ ಮ್ಯಾಕ್ರೋ ಟ್ರೆಂಡ್ಸ್ ಸಂಶೋಧನಾ ಸಂಸ್ಥೆ ಪೈನ್ಟ್ರೀ ಸಂಸ್ಥಾಪಕ ರಿತೇಶ್ ಜೈನ್ (Ritesh Jain


ಹಿಂದೂ ಮಹಾಸಾಗರದಲ್ಲಿ ಇರಾನ್ 'ತೈಲ ಟ್ಯಾಂಕರ್' ವಶಕ್ಕೆ ಪಡೆದ ಅಮೆರಿಕ!
ಈ ವಾರದ ಆರಂಭದಲ್ಲಿ ಮಲಾಕ್ಕಾ ಜಲಸಂಧಿಯನ್ನು ದಾಟಿದ ನಂತರ ಹಡಗು ಮಲೇಷ್ಯಾದ ಪಶ್ಚಿಮಕ್ಕೆ ಚಲಿಸುತ್ತಿದೆ ಎಂದು ಟ್ರ್ಯಾಕಿಂಗ್ ಡೇಟಾ ತೋರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರಂತರ ಮಿಲಿಟರಿ ದಾಳಿ ಬೆದರಿಕೆಗಳ ನಡುವೆ ಹಿಂದೂ ಮಹಾಸಾಗರದಲ್ಲಿ ಇರಾನ್ಗೆ ಸೇರಿದ ತೈಲ ಟ್ಯಾಂಕರ್ ಅನ್ನು ಅಮೆರಿಕ ವಶಪಡಿಸಿಕೊಂಡಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ. ಇರಾನ್ ಮಂಜೂರು ಮಾಡಿದ ಸ್ಕೈವೇವ್ ಹಡಗು ಕಚ್ಚಾ ತೈಲವನ್ನು ಸಾಗಿಸುತ್ತಿತ್ತು ಎಂದು ಗುರುತಿಸಿದ ನಂತರ ರಾತ್ರೋರಾತ್ರಿ ಬಂಧಿಸಲಾಗಿದೆ ಎಂದು ಮೂವರು ಅಮೆರಿಕದ ಅಧಿಕಾರಿಗಳ ಹೇಳಿಕೆಯನ್ನು ಉಲ್ಲೇಖಿಸಿ ವಾಲ್ ಸ್ಟ್ರೀಟ್ ಜರ್ನಲ


ಆರ್ಥಿಕತೆ ಎಕ್ಕುಟ್ಟಿ ಹೋಗಲಿ, ಆದ್ರೆ ಮೆಲೋನಿಗೆ 'ಮೆಲೋಡಿ' ಕೊಡುವುದು ತಡವಾಗ್ಬಾರ್ದು: ಖರ್ಗೆ ಕಿಡಿ
ಎಕ್ಸ್ ನಲ್ಲಿ ಮೋದಿ ಹಾಗೂ ಮೆಲೋನಿ ಅವರ ವಿಡಿಯೋ ಹಂಚಿಕೊಂಡು ತೀವ್ರ ವಾಗ್ದಾಳಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಪ್ರಮುಖವಾಗಿ, ಇಂಧನ ಹಾಗೂ ಆರ್ಥಿಕ ಬಿಕ್ಕಟ್ಟು ಪರಿಹಾರ ಎಕ್ಕುಟ್ಟಿ ಹೋಗಲಿ. ಆದರೆ ಮೆಲೋನಿ ಅವರಿಗೆ ಮೆಲೋಡಿ ನೀಡುವುದು ತಡವಾಗಬಾರದು ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಮೆಲೋಡಿ ಚಾಕಲೇಟ್ ಗಿಫ್ಟ್ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದ್ದು, ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಎಕ್ಸ್ ನಲ್ಲಿ ಮೋದಿ ಹಾಗೂ ಮೆಲೋನಿ ಅವರ ವಿಡಿಯೋ ಹಂಚಿಕೊಂಡು ತೀವ್ರ


ಇರಾನ್ ಮತ್ತು ಅಮೆರಿಕ ಮಧ್ಯೆ ಮತ್ತೆ ಯುದ್ಧ 2.0 ಶುರು?: ಸೌದಿಗೆ 8,000 ಸೈನಿಕರು, 16 JF-17 ಯುದ್ಧ ವಿಮಾನ ಕಳುಹಿಸಿದ Pak
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನವು ಪರಸ್ಪರ ರಕ್ಷಣಾ ಒಪ್ಪಂದದಡಿಯಲ್ಲಿ ಸೌದಿ ಅರೇಬಿಯಾಕ್ಕೆ ಸುಮಾರು 8,000 ಸೈನಿಕರು, ಒಂದು ಪೂರ್ಣ ಯುದ್ಧ ವಿಮಾನ ಸ್ಕ್ವಾಡ್ರನ್ ಮತ್ತು ಸುಧಾರಿತ ವಾಯು ರಕ್ಷಣಾ ವ್ಯವಸ್ಥೆಯನ್ನು ನಿಯೋಜಿಸಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನವು ಪರಸ್ಪರ ರಕ್ಷಣಾ ಒಪ್ಪಂದದಡಿಯಲ್ಲಿ ಸೌದಿ ಅರೇಬಿಯಾಕ್ಕೆ ಸುಮಾರು 8,000 ಸೈನಿಕರು, ಒಂದು ಪೂರ್ಣ ಯುದ್ಧ ವಿಮಾನ ಸ್ಕ್ವಾಡ್ರನ್ ಮತ್ತು ಸುಧಾರಿತ ವಾಯು ರಕ್ಷಣಾ ವ್ಯವಸ್ಥೆಯನ್ನು ನಿಯೋಜಿಸಿದೆ. ಮೂಲಗಳು ಇದನ್ನು ಮಹತ್ವದ ಯುದ್ಧ-ಸಮರ್ಥ ಪಡೆ ಎಂದು ವಿವರ


'ಪಾಕಿಸ್ತಾನಕ್ಕೆ ಉಪಕಾರ' ಮಾಡಲು ಇರಾನ್ನೊಂದಿಗೆ ಕದನವಿರಾಮ; ಪಾಕ್ ಪ್ರಧಾನಿ 'ಅದ್ಭುತ' ಎಂದ ಟ್ರಂಪ್
ನಾವು ಅದನ್ನು ಪಾಕಿಸ್ತಾನದ ಅನುಕೂಲಕ್ಕಾಗಿ ಒಪ್ಪಿಕೊಂಡಿದ್ದೇವೆ. ಪಾಕಿಸ್ತಾನದ ಪ್ರಧಾನಿ ಶೆಹಬಾಹಜ್ ಷರೀಫ್ ಹಾಗೂ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅದ್ಬುತ ಜನ" ಎಂದು ಟ್ರಂಪ್ ಹಾಡಿ ಹೊಗಳಿದ್ದಾರೆ. ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷವನ್ನು ಶಮನಗೊಳಿಸಲು ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಬಗ್ಗೆ ಶನಿವಾರ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧಗಳಿಗೆ ಸಂಪೂರ್ಣ ಪರಿಹಾರ ಕಂಡುಕೊಳ್ಳಲು ರಾಜತಾಂತ್ರಿಕ ಮಾತುಕತೆಗೆ ಅವಕಾಶ ನೀಡುವ ಸಲುವಾಗಿ ಮತ್ತು ಪಾಕಿಸ್ತಾನದ ಅನುಕೂಲಕ್ಕಾಗಿ


'ಇರಾನ್ ಮೇಲೆ ಪರಮಾಣು ಬಾಂಬ್ ಹಾಕಲು ಮುಂದಾಗಿದ್ದ ಟ್ರಂಪ್, ಆದ್ರೆ...'; ಆಘಾತಕಾರಿ ಮಾಹಿತಿ ಬಹಿರಂಗ!
ಇರಾನ್ ವಿರುದ್ಧದ ಯುದ್ಧದ ಕುರಿತು ANI ಜತೆ ಮಾತನಾಡಿದ ಲ್ಯಾರಿ ಜಾನ್ಸನ್ ಅವರು, ಟ್ರಂಪ್ ಪರಮಾಣು ಬಾಂಬ್ ಬಳಸಲು ಮುಂದಾಗಿದ್ದರು ಎಂದು ಹೇಳಿದ್ದಾರೆ. ವಾಷಿಂಗ್ಟನ್: ಇರಾನ್ ವಿರುದ್ಧ ಕೆಂಡಕಾರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ ರಕ್ಷಣಾ ಪಡೆಗಳ ಜಂಟಿ ಮುಖ್ಯಸ್ಥ ಡಾನ್ ಕೇನ್ ಅವರಿಗೆ ಟೆಹ್ರಾನ್ ಮೇಲೆ ಪರಮಾಣು ಬಾಂಬ್ ಹಾಕಬಹುದೇ ಎಂದು ಕೇಳಿದ್ದರು. ಆದರೆ ಡಾನ್ ಕೇನ್ ಇದಕ್ಕೆ ನಿರಾಕರಿಸಿದರು ಎಂದು ಶುಕ್ರವಾರ ಸಿಐಎ ಮಾಜಿ ವಿಶ್ಲೇಷಕ ಲ್ಯಾರಿ ಜಾನ್ಸನ್ ಅವರು ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ. ಇರಾನ್ ವಿರುದ್ಧದ ಯುದ್ಧದ ಕುರಿತು ANI ಜತೆ ಮಾತನಾಡಿದ ಲ್ಯಾರಿ


ಉಕ್ರೇನ್ ಮತ್ತು ಪಶ್ಚಿಮ ಏಷ್ಯಾ ಯುದ್ಧ ಸೇರಿದಂತೆ ರಷ್ಯಾದ ವಿದೇಶಾಂಗ ಸಚಿವ ಲಾವ್ರೊವ್ ಜೊತೆ ಪ್ರಧಾನಿ ಮೋದಿ ಚರ್ಚೆ!
ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿ ಸೇರಿದಂತೆ... ನವದೆಹಲಿ: ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿ ಸೇರಿದಂತೆ ಪರಸ್ಪರ ಹಿತಾಸಕ್ತಿಯ ಹಲವಾರು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅವರು ಚರ್ಚಿಸಿದರು. ಮಾತುಕತೆ ಮತ್ತು ರಾಜತಾಂತ


ಇರಾನ್ ನ ಶಾಂತಿ ಪ್ರಸ್ತಾವ ತಿರಸ್ಕರಿಸಿದ ಡೊನಾಲ್ಡ್ ಟ್ರಂಪ್
ಟ್ರಂಪ್ ಈ ಪ್ರಸ್ತಾವನೆಗೆ ತಮ್ಮ ಪ್ರತಿಕ್ರಿಯೆಯನ್ನು ಟ್ರೂತ್ ಸೋಷಿಯಲ್ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ವಾಷಿಂಗ್ ಟನ್: ಇರಾನ್ನ ಇತ್ತೀಚಿನ ಶಾಂತಿ ಪ್ರಸ್ತಾಪವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿರಸ್ಕರಿಸಿದ್ದಾರೆ, ಟೆಹ್ರಾನ್ನ ಪ್ರತಿಕ್ರಿಯೆಯನ್ನು "ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ" ಎಂದು ಕರೆದಿದ್ದಾರೆ. ಟ್ರಂಪ್ ಈ ಪ್ರಸ್ತಾವನೆಗೆ ತಮ್ಮ ಪ್ರತಿಕ್ರಿಯೆಯನ್ನು ಟ್ರೂತ್ ಸೋಷಿಯಲ್ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಇರಾನ್ನೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಇದು ಒಂದು ಪ್ರಗತಿಗೆ ಕಾರಣವಾಗಬಹುದು ಎಂಬ ಭರವಸೆಯ ನಡುವೆ ಅಮೆರಿಕ ಅಧ್ಯಕ್ಷರು ಭಾನುವಾ


ಇರಾನ್ 'ಬೇಗ ಬುದ್ಧಿ ಕಲಿಯಲಿ', ಇಲ್ಲಾಂದ್ರೆ ವಿನಾಶ: ಕೈಯಲ್ಲಿ ಅಸಾಲ್ಟ್ ರೈಫಲ್ ಹಿಡಿದು ಬೆದರಿಕೆ ಹಾಕಿದ ಟ್ರಂಪ್
ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿದೆ. ಹಾರ್ಮುಜ್ ಮೇಲಿನ ದಿಗ್ಬಂಧನದ ಮಧ್ಯೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿದೆ. ಹಾರ್ಮುಜ್ ಮೇಲಿನ ದಿಗ್ಬಂಧನದ ಮಧ್ಯೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ತನ್ನ ಪರಮಾಣು ಕಾರ್ಯಕ್ರಮಕ್ಕೆ ಶೀಘ್ರದಲ್ಲೇ ರಾಜತಾಂತ್ರಿಕ ಪರಿಹಾರ ಸಿಗದಿದ್ದರೆ, ಯುಎಸ್ ಇನ್ನೂ ಕಠಿಣ ನಿಲುವು ತೆಗೆದುಕೊಳ್ಳುತ್ತದೆ ಎಂದು ಟ್ರಂಪ್ ಟೆಹ್ರಾನ್ಗೆ ಎಚ್ಚರಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಯ
bottom of page

